Webdunia - Bharat's app for daily news and videos

Install App

ಈಶಾನ್ಯ ರಾಜ್ಯಗಳಲ್ಲಿ ಭೀಕರ ಪ್ರವಾಹ, ಭೂಕುಸಿತ: 80 ಜನರ ಸಾವು

Webdunia
ಶುಕ್ರವಾರ, 14 ಜುಲೈ 2017 (11:02 IST)
ಗುವಾಹಟಿ:ಈಶಾನ್ಯ  ಭಾಗದ ಮೂರು ರಾಜ್ಯಗಳಾದ ಅಸ್ಸಾಂ, ಅರುಣಾಚಲಪ್ರದೇಶ, ಮಣಿಪುರಗಳಲಿ ಉಂಟಾದ ನೆರೆ ಪ್ರವಾಹ ಹಾಗೂ ಭೂಕುಸಿತದಿಂದ 58 ಜಿಲ್ಲೆಗಳಿಗೆ ಹಾನಿಯುಂಟಾಗಿದ್ದು, ಸುಮಾರು 80 ಮಂದಿ ಸಾವನ್ನಪ್ಪಿದ್ದಾರೆ. 20 ಲಕ್ಷಕ್ಕೂ ಹೆಚ್ಚು ಜನ ಸಂತ್ರಸ್ತರಾಗಿದ್ದಾರೆ.
 
ಅಸ್ಸಾಂನ ನ 26 ಜಿಲ್ಲೆಗಳಲ್ಲಿ 17 ಲಕ್ಷ ಜನ ಸಂತ್ರಸ್ತರಾಗಿದ್ದು ಪ್ರವಾಹದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 49ಕ್ಕೇರಿದೆ. ಬ್ರಹ್ಮಪುತ್ರ ಸೇರಿದಂತೆ ಇತರ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಹಲವು ಪಟ್ಟಣಗಳು ಜಲಾವೃತಗೊಂಡಿದ್ದು, ಕಟ್ಟಡಗಳು, ಮನೆಗಳು ಮತ್ತು ಸೇತುವೆಗಳು ಹಾನಿಗೊಳಗಾಗಿವೆ. 
 
ಕಾಝಿರಂಗ ರಾಷ್ಟ್ರೀಯ ಉದ್ಯಾನವನದ 70 ಶೇಕಡಾ ಭಾಗ ಜಲಾವೃತ್ತವಾಗಿದೆ. ಹಲವು ಪ್ರಾಣಿಗಳು ಸಾವನ್ನಪ್ಪಿದ್ದು ಕೆಲವು ಎತ್ತರದ ಪ್ರದೇಶಗಳಲ್ಲಿ ಆಶ್ರಯ ಪಡೆದಿವೆ. ಗೋಲಘಾಟ್‌, ಲಕ್ಕೀಂಪುರ್‌, ನಾಗೌನ್‌ನಲ್ಲಿ ಅತೀಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. 86,000 ಹೆಕ್ಟೇರ್‌ ಬೆಳೆ ನೀರಿನಲ್ಲಿ ಮುಳುಗಡೆಯಾಗಿದೆ. ಇನ್ನು ಕೇಂದ್ರ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್ ಈಶಾನ್ಯ ರಾಜ್ಯಗಳ  ನೆರೆ ಪರಿಸ್ಥಿತಿಯನ್ನು ವೈಮಾನಿಕ ಸಮೀಕ್ಷೆ ಮೂಲಕ ಪರಿಶೀಲಿಸಿದ್ದು, ಕೇಂದ್ರದಿಂದ ಎಲ್ಲಾ ರೀತಿ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ಹತ್ಯೆ

ಮದ್ಯದ ಬೆಲೆ ಕೇಳಿಯೇ ನಶೆ ಏರುವಂತಾಗಿದೆ: ಬಿಜೆಪಿ ವ್ಯಂಗ್ಯ

Suhas Shetty Case: ಹತ್ಯೆ ಹಿಂದೆ ಬಜ್ಪೆ ಹೆಡ್‌ ಕಾನ್‌ಸ್ಟೇಬಲ್‌ ಭಾಗಿಯಾಗಿರುವ ಶಂಕೆ

Suhas Shetty Case: ಯುಟಿ ಖಾದರ್ ಸ್ಪೀಕರ್‌ ಆಗಿರುವವರೆಗೆ ಸಾವಿಗೆ ನ್ಯಾಯ ಸಿಗುವ ನಂಬಿಕೆಯಿಲ್ಲ

Pahalgam Attack: ಪಾಕ್‌ ಸರ್ಕಾರದ ನಡೆಗೆ ಛೀಮಾರಿ ಹಾಕಿದ ಪಾಕಿಸ್ತಾನದ ಧರ್ಮಗುರು, Video Viral

ಮುಂದಿನ ಸುದ್ದಿ
Show comments