Webdunia - Bharat's app for daily news and videos

Install App

ಮಧ್ಯಪ್ರದೇಶ ಪೊಲೀಸರಿಗೆ ನಕ್ಸಲರಿಗಿಂತ ಆರೆಸ್ಸೆಸ್, ಬಜರಂಗ ದಳದ ಹೆದರಿಕೆ

Webdunia
ಮಂಗಳವಾರ, 18 ಅಕ್ಟೋಬರ್ 2016 (17:27 IST)
ಮಧ್ಯಪ್ರದೇಶದ ಪೊಲೀಸರು ನಕ್ಸಲರಿಗಿಂತ ಆರೆಸ್ಸೆಸ್, ಬಜರಂಗದಳ ಕಾರ್ಯಕರ್ತರಿಗೆ ಹೆದರುತ್ತಾರೆ ಎಂದು ಅಮಾನತ್ತುಗೊಂಡ ಪೊಲೀಸರ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.
ಆರೆಸ್ಸೆಸ್ ಪ್ರಚಾರಕ ಸುರೇಶ್ ಎಂಬಾತ ಸಂಸದ ಅಸಾದುದ್ದೀನ್ ಒವೈಸಿ ವಿರುದ್ಧ ವಾಟ್ಸಪ್‌ನಲ್ಲಿ ಅವಹೇಳನಾಕಾರಿ ಸಂದೇಶ ಪೋಸ್ಟ್ ಮಾಡಿದ್ದ. ದೂರಿನ ಹಿನ್ನೆಲೆಯಲ್ಲಿ ಆರೋಪಿ ಸುರೇಶ್‌ನನ್ನು ಬಂಧಿಸಲು ಎಎಸ್‌ಪಿ ರಾಜೇಶ್ ಶರ್ಮಾ ನೇತೃತ್ವದ ತಂಡ ತೆರಳಿತ್ತು.   
 
ಆದರೆ, ಆರೆಸ್ಸೆಸ್ ಪ್ರಚಾರಕ ಸುರೇಶ್, ಪೊಲೀಸರೊಂದಿಗೆ ದುರ್ವರ್ತನೆ ತೋರಿದ್ದಲ್ಲದೇ ಆತನ ಬೆಂಬಲಿಗರು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಪೊಲೀಸರಿಂದ ತಪ್ಪಿಸಿಕೊಂಡ ಸುರೇಶ್ ಸ್ಥಳದಿಂದ ಓಡಿಹೋಗಿದ್ದಾನೆ. ನಂತರ ಪೊಲೀಸರು ಆತನ ಬೆನ್ನಟ್ಟಿ ಹಿಡಿದಿದ್ದಾರೆ.
 
ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ಸುರೇಶ್ ನೀವು ಯಾರನ್ನು ಬಂಧಿಸುತ್ತಿದ್ದೀರಿ ಎನ್ನುವುದು ತಿಳಿದುಕೊಳ್ಳಿ. ಪ್ರಧಾನಿ ಅಥವಾ ಮುಖ್ಯಮಂತ್ರಿಯನ್ನೇ ಉರುಳಿಸುವ ಸಾಮರ್ಥ್ಯ ಹೊಂದಿದ್ದೇನೆ ಎಂದು ಗುಡುಗಿದ್ದಾನೆ. 
 
ಆರೆಸ್ಸೆಸ್ ಪ್ರಚಾರಕ ಸುರೇಶ್‌ನನ್ನು ಬಂಧಿಸಿದ ಪೊಲೀಸರನ್ನು ಅಮಾನತ್ತುಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಇದರಿಂದ ಆಘಾತಗೊಂಡ ಪೊಲೀಸರು ಕುಟುಂಬದ ಸದಸ್ಯರು ಪೊಲೀಸ್ ಮಹಾನಿರ್ದೇಶಕರನ್ನು ಭೇಟಿ ಮಾಡಿ ಅಮಾನತ್ತು ಆದೇಶವನ್ನು ಹಿಂಪಡೆಯಬೇಕು ಎಂದು  ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments