Webdunia - Bharat's app for daily news and videos

Install App

ನಿರ್ದಿಷ್ಟವಾಗಿ ಪೆಗಾಸಸ್ ಎನ್ನಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

Webdunia
ಗುರುವಾರ, 25 ಆಗಸ್ಟ್ 2022 (14:03 IST)
ನವದೆಹಲಿ : ಪೆಗಾಸಸ್ ಸ್ಪೈವೇರ್ ಬಳಸಿ ದೇಶದ ಪ್ರಮುಖ ವ್ಯಕ್ತಿಗಳ ಮೇಲೆ ಅಕ್ರಮ ಕಣ್ಗಾವಲು ವಹಿಸುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ಗೆ ತಜ್ಞರ ಸಮಿತಿ ವರದಿ ಸಲ್ಲಿಕೆ ಮಾಡಿದೆ.

ಮೂರು ಭಾಗಗಳಲ್ಲಿ ವರದಿ ಸಲ್ಲಿಕೆಯಾಗಿದ್ದು, ತಾಂತ್ರಿಕ ಸಮಿತಿಯಿಂದ ಎರಡು ವರದಿಗಳು ಮತ್ತು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶ ಆರ್.ವಿ ರವೀಂದ್ರನ್ ಮೇಲ್ವಿಚಾರಣಾ ಸಮಿತಿಯಿಂದ ಒಂದು ವರದಿಯನ್ನು ಸಲ್ಲಿಸಲಾಗಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ, ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠಕ್ಕೆ ಸಮಿತಿಯೂ ವರದಿ ಸಲ್ಲಿಸಿತ್ತು.

ವರದಿ ಸಲ್ಲಿಕೆ ವೇಳೆ ಭಾರತ ಸರ್ಕಾರವು ಸಮಿತಿಯೊಂದಿಗೆ ಸಹಕರಿಸಲಿಲ್ಲ ಎಂದು ಟೀಕಿಸಿತು. ಅಲ್ಲದೇ ತಮ್ಮ ಫೋನ್ಗಳನ್ನು ಸಲ್ಲಿಸಿದ ಸದಸ್ಯರು ವರದಿಯನ್ನು ಬಿಡುಗಡೆ ಮಾಡದಂತೆ ಹಾಗೂ ವರದಿಯನ್ನು ಗೌಪ್ಯವಾಗಿಡುವಂತೆ ವಿನಂತಿಸಿದ್ದರು. 

ವರದಿಗಳ ಪ್ರಕಾರ, ತಾಂತ್ರಿಕ ಸಮಿತಿಯೂ 29 ಫೋನ್ಗಳನ್ನು ಪರಿಶೀಲಿಸಿದೆ, 29ರ ಪೈಕಿ 5 ಫೋನ್ಗಳಲ್ಲಿ ಕೆಲವು ಮಾಲ್ವೇರ್ಗಳನ್ನು ಹೊಂದಿರುವುದು ಕಂಡುಕೊಂಡಿದೆ. ಆದರೆ ಇದಕ್ಕೆ ಪೆಗಾಸಸ್ ನೇರ ಕಾರಣ ಎಂದು ನಿರ್ದಿಷ್ಟವಾಗಿ ಹೇಳಲು ಸಾಧ್ಯವಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments