Webdunia - Bharat's app for daily news and videos

Install App

ನೋಟು ನಿಷೇಧ ಕಪ್ಪು ಹಣದ ವಿರುದ್ಧ ದಾಳಿಯಲ್ಲ, ಆರ್ಥಿಕ ದರೋಡೆ: ರಾಹುಲ್ ಗಾಂಧಿ

Webdunia
ಶನಿವಾರ, 24 ಡಿಸೆಂಬರ್ 2016 (12:01 IST)
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೋಟು ನಿಷೇಧ ಕಪ್ಪು ಹಣದ ಅಥವಾ ಭ್ರಷ್ಟಾಚಾರದ ವಿರುದ್ಧವಲ್ಲ.ಆದರೆ ಇದೊಂದು ಆರ್ಥಿಕ ದರೋಡೆಯಾಗಿದೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ. 
 
ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದ ಶೇ.99 ರಷ್ಟು ಜನತೆಯನ್ನು ತೊಂದರೆಗೆ ಸಿಲುಕಿಸಿದ್ದಲ್ಲದೇ ಕಪ್ಪು ಹಣ ಹೊಂದಿದ ಶೇ.1 ರಷ್ಟು ಭಾರಿ ಶ್ರೀಮಂತರನ್ನು ಗುರಿಯಾಗಿಸಿಲ್ಲ ಎಂದು ಟೀಕಿಸಿದರು.
 
ದೇಶದಲ್ಲಿ ಭ್ರಷ್ಟಾಚಾರವನ್ನು ಹೊಗಲಾಡಿಸಬೇಕು ಎನ್ನುವುದೇ ಕಾಂಗ್ರೆಸ್ ಪಕ್ಷದ ಬಯಕೆ. ಅದಕ್ಕಾಗಿ ಪ್ರಧಾನಿ ಮೋದಿ ಯಾವುದೇ ಕ್ರಮ ತೆಗೆದುಕೊಂಡರೂ ಕಾಂಗ್ರೆಸ್ ಪಕ್ಷ ಬೆಂಬಲಿಸಲಿದೆ ಎಂದರು.
 
ಆದರೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೋಟು ನಿಷೇಧ ಕಪ್ಪು ಹಣದ ಅಥವಾ ಭ್ರಷ್ಟಾಚಾರದ ವಿರುದ್ಧವಲ್ಲ.ಆದರೆ ಇದೊಂದು ಆರ್ಥಿಕ ದರೋಡೆಯಾಗಿದೆ. ಬಡವರ ಪಾಲಿಗೆ ಶಾಪವಾಗಿ ಪರಿಣಮಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಸ್ವಿಸ್ ಬ್ಯಾಂಕ್‌ನಲ್ಲಿ ಕಪ್ಪು ಹಣ ಹೊಂದಿದವರ ಹೆಸರುಗಳನ್ನು ಪ್ರಧಾನಿ ಮೋದಿ ಯಾಕೆ ಬಹಿರಂಗಪಡಿಸುತ್ತಿಲ್ಲ ಎಂದು ಪ್ರಶ್ನಿಸಿದರು.
 
ಸ್ವಿಸ್ ಸರಕಾರ ಪ್ರಧಾನಿ ಮೋದಿ ಸರಕಾರಕ್ಕೆ ಕಪ್ಪು ಹಣ ಹೊಂದಿದವರ ಪಟ್ಟಿಯನ್ನು ನೀಡಿದೆ. ಕಪ್ಪು ಹಣ ಹೊಂದಿದವರ ಪಟ್ಟಿಯನ್ನು ಮೋದಿ ಸರಕಾರ ಯಾಕೆ ಲೋಕಸಭೆ ಅಥವಾ ರಾಜ್ಯಸಭೆಯ ಮುಂದಿಡುತ್ತಿಲ್ಲ. ಅವರು ಯಾರು ಎನ್ನುವುದು ಸದನಕ್ಕೆ ತಿಳಿಯಬೇಕಾಗಿದೆ. ಆದ್ದರಿಂದ, ಮೋದಿಯವರೇ ಕಪ್ಪು ಹಣ ಹೊಂದಿದ ಕುಳಗಳ ಹೆಸರುಗಳನ್ನು ಸದನದ ಮುಂದಿಡಿ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments