Select Your Language

Notifications

webdunia
webdunia
webdunia
webdunia

2 ವರ್ಷಗಳಿಂದ ಮೋದಿ ಸ್ವಕ್ಷೇತ್ರ ಅಭಿವೃದ್ಧಿಯಿಂದ ವಂಚಿತವಾಗಿದೆ: ದಿಗ್ವಿಜಯ್ ಸಿಂಗ್

2 ವರ್ಷಗಳಿಂದ ಮೋದಿ ಸ್ವಕ್ಷೇತ್ರ ಅಭಿವೃದ್ಧಿಯಿಂದ ವಂಚಿತವಾಗಿದೆ: ದಿಗ್ವಿಜಯ್ ಸಿಂಗ್
ವಾರಣಾಸಿ , ಶುಕ್ರವಾರ, 27 ಮೇ 2016 (20:28 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಂತ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ಯಾವುದೇ ರೀತಿಯ ಅಭಿವೃದ್ಧಿಯಾಗಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
 
ಕಳೆದ ಎರಡು ವರ್ಷಗಳ ಅವಧಿಯಲ್ಲಿ ವಾರಣಾಸಿ ಲೋಕಸಭೆ ಕ್ಷೇತ್ರದಲ್ಲಿ ಅಭಿವೃದ್ಧಿ ಮರಿಚೀಕೆಯಾಗಿಯೇ ಉಳಿದಿದೆ. ಪ್ರಧಾನಿ ಮೋದಿ ಕ್ಷೇತ್ರವನ್ನು ಅಭಿವೃದ್ಧಿಪಡಿಸುತ್ತಾರೆ ಎನ್ನುವ ಜನತೆಯ ನಂಬಿಕೆ ಹುಸಿಯಾಗಿದೆ ಎಂದು ತಿಳಿಸಿದ್ದಾರೆ.
 
ಪ್ರಧಾನಿ ಮೋದಿ ಲೋಕಸಭಗೆ ಆಯ್ಕೆಯಾದ ನಂತರ ಜಿಲ್ಲೆಯ ಅಭಿವೃದ್ಧಿಗಾಗಿ ಯಾವುದೇ ಜನಪರ ಕಾರ್ಯಗಳನ್ನು ಮಾಡಿಲ್ಲ ಎಂದು ಆರೋಪಿಸಿದರು.
 
ಜಿಲ್ಲೆಯ ತುಂಬಾ ಪ್ರದಕ್ಷಿಣೆ ಹಾಕಿದ್ದೇನೆ. ಅದೇ ತಗ್ಗು ದಿನ್ನೆಯ ರಸ್ತೆಗಳು, ಮೂಲಸೌಕರ್ಯ ಕೊರತೆ, ಎಲ್ಲಿ ನೋಡಿದರಲ್ಲಿ ಕಸದ ತಿಪ್ಪೆ ಗುಂಡಿಗಳಿಂದಾಗಿ ಜಿಲ್ಲೆ ಹೊಲಸು ನಾರುತ್ತಿದೆ. ಜಿಲ್ಲೆಯಲ್ಲಿ ಸ್ವಚ್ಚ ಭಾರತ್ ಅಭಿಯಾನ್ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
 
ಪ್ರಧಾನಿ ಮೋದಿ ಲೋಕಸಭೆಯಿಂದ ಆಯ್ಕೆಯಾಗುವ ಮುನ್ನ ಮಾತ್ರ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಮೋದಿ ಸರಕಾರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಕಿಡಿಕಾರಿದ್ದಾರೆ. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಧ್ಯಪ್ರದೇಶ್: ಫೇಸ್‌ಬುಕ್‌ನಲ್ಲಿ ನೆಹರುರನ್ನು ಹೊಗಳಿದ್ದಕ್ಕಾಗಿ ಐಎಎಸ್ ಅಧಿಕಾರಿಗೆ ಟ್ರಾನ್ಸಫರ್