Webdunia - Bharat's app for daily news and videos

Install App

2 ವರ್ಷಗಳಿಂದ ಮೋದಿ ಸ್ವಕ್ಷೇತ್ರ ಅಭಿವೃದ್ಧಿಯಿಂದ ವಂಚಿತವಾಗಿದೆ: ದಿಗ್ವಿಜಯ್ ಸಿಂಗ್

Webdunia
ಶುಕ್ರವಾರ, 27 ಮೇ 2016 (20:28 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಂತ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ಯಾವುದೇ ರೀತಿಯ ಅಭಿವೃದ್ಧಿಯಾಗಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
 
ಕಳೆದ ಎರಡು ವರ್ಷಗಳ ಅವಧಿಯಲ್ಲಿ ವಾರಣಾಸಿ ಲೋಕಸಭೆ ಕ್ಷೇತ್ರದಲ್ಲಿ ಅಭಿವೃದ್ಧಿ ಮರಿಚೀಕೆಯಾಗಿಯೇ ಉಳಿದಿದೆ. ಪ್ರಧಾನಿ ಮೋದಿ ಕ್ಷೇತ್ರವನ್ನು ಅಭಿವೃದ್ಧಿಪಡಿಸುತ್ತಾರೆ ಎನ್ನುವ ಜನತೆಯ ನಂಬಿಕೆ ಹುಸಿಯಾಗಿದೆ ಎಂದು ತಿಳಿಸಿದ್ದಾರೆ.
 
ಪ್ರಧಾನಿ ಮೋದಿ ಲೋಕಸಭಗೆ ಆಯ್ಕೆಯಾದ ನಂತರ ಜಿಲ್ಲೆಯ ಅಭಿವೃದ್ಧಿಗಾಗಿ ಯಾವುದೇ ಜನಪರ ಕಾರ್ಯಗಳನ್ನು ಮಾಡಿಲ್ಲ ಎಂದು ಆರೋಪಿಸಿದರು.
 
ಜಿಲ್ಲೆಯ ತುಂಬಾ ಪ್ರದಕ್ಷಿಣೆ ಹಾಕಿದ್ದೇನೆ. ಅದೇ ತಗ್ಗು ದಿನ್ನೆಯ ರಸ್ತೆಗಳು, ಮೂಲಸೌಕರ್ಯ ಕೊರತೆ, ಎಲ್ಲಿ ನೋಡಿದರಲ್ಲಿ ಕಸದ ತಿಪ್ಪೆ ಗುಂಡಿಗಳಿಂದಾಗಿ ಜಿಲ್ಲೆ ಹೊಲಸು ನಾರುತ್ತಿದೆ. ಜಿಲ್ಲೆಯಲ್ಲಿ ಸ್ವಚ್ಚ ಭಾರತ್ ಅಭಿಯಾನ್ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
 
ಪ್ರಧಾನಿ ಮೋದಿ ಲೋಕಸಭೆಯಿಂದ ಆಯ್ಕೆಯಾಗುವ ಮುನ್ನ ಮಾತ್ರ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಮೋದಿ ಸರಕಾರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಕಿಡಿಕಾರಿದ್ದಾರೆ. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments