2 ವರ್ಷಗಳಿಂದ ಮೋದಿ ಸ್ವಕ್ಷೇತ್ರ ಅಭಿವೃದ್ಧಿಯಿಂದ ವಂಚಿತವಾಗಿದೆ: ದಿಗ್ವಿಜಯ್ ಸಿಂಗ್

Webdunia
ಶುಕ್ರವಾರ, 27 ಮೇ 2016 (20:28 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಂತ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ಯಾವುದೇ ರೀತಿಯ ಅಭಿವೃದ್ಧಿಯಾಗಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
 
ಕಳೆದ ಎರಡು ವರ್ಷಗಳ ಅವಧಿಯಲ್ಲಿ ವಾರಣಾಸಿ ಲೋಕಸಭೆ ಕ್ಷೇತ್ರದಲ್ಲಿ ಅಭಿವೃದ್ಧಿ ಮರಿಚೀಕೆಯಾಗಿಯೇ ಉಳಿದಿದೆ. ಪ್ರಧಾನಿ ಮೋದಿ ಕ್ಷೇತ್ರವನ್ನು ಅಭಿವೃದ್ಧಿಪಡಿಸುತ್ತಾರೆ ಎನ್ನುವ ಜನತೆಯ ನಂಬಿಕೆ ಹುಸಿಯಾಗಿದೆ ಎಂದು ತಿಳಿಸಿದ್ದಾರೆ.
 
ಪ್ರಧಾನಿ ಮೋದಿ ಲೋಕಸಭಗೆ ಆಯ್ಕೆಯಾದ ನಂತರ ಜಿಲ್ಲೆಯ ಅಭಿವೃದ್ಧಿಗಾಗಿ ಯಾವುದೇ ಜನಪರ ಕಾರ್ಯಗಳನ್ನು ಮಾಡಿಲ್ಲ ಎಂದು ಆರೋಪಿಸಿದರು.
 
ಜಿಲ್ಲೆಯ ತುಂಬಾ ಪ್ರದಕ್ಷಿಣೆ ಹಾಕಿದ್ದೇನೆ. ಅದೇ ತಗ್ಗು ದಿನ್ನೆಯ ರಸ್ತೆಗಳು, ಮೂಲಸೌಕರ್ಯ ಕೊರತೆ, ಎಲ್ಲಿ ನೋಡಿದರಲ್ಲಿ ಕಸದ ತಿಪ್ಪೆ ಗುಂಡಿಗಳಿಂದಾಗಿ ಜಿಲ್ಲೆ ಹೊಲಸು ನಾರುತ್ತಿದೆ. ಜಿಲ್ಲೆಯಲ್ಲಿ ಸ್ವಚ್ಚ ಭಾರತ್ ಅಭಿಯಾನ್ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
 
ಪ್ರಧಾನಿ ಮೋದಿ ಲೋಕಸಭೆಯಿಂದ ಆಯ್ಕೆಯಾಗುವ ಮುನ್ನ ಮಾತ್ರ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಮೋದಿ ಸರಕಾರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಕಿಡಿಕಾರಿದ್ದಾರೆ. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments