ತಮಿಳುನಾಡಿಗೆ ಪ್ರತಿನಿತ್ಯ 1ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ

Sampriya
ಗುರುವಾರ, 11 ಜುಲೈ 2024 (19:00 IST)
Photo Courtesy X
ನವದೆಹಲಿ:  ರಾಜ್ಯದಲ್ಲಿ ಆಗುತ್ತಿರುವ ಉತ್ತಮ ಮಳೆಯಿಂದ  ಕೆಆರ್ ಎಸ್ ಗೆ ಈ ಬಾರಿ ನೀರು ಹರಿದುಬರುತ್ತಿರುವುದರಿಂದ ಈ ಭಾಗದ ಜನರಲ್ಲಿ ಸಂತಸ ಮನೆ ಮಾಡಿದೆ. ಇದರ ಮಧ್ಯ ಕಾವೇರಿ ನೀರು ನಿರ್ವಹಣಾ ಸಮಿತಿ, ತಮಿಳುನಾಡಿಗೆ ಜುಲೈ 31 ರವರೆಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಗುರುವಾರ ಸೂಚನೆ ನೀಡಿದೆ.

ಇಂದು ದೆಹಲಿಯಲ್ಲಿ ನಡೆದ CWRC ಯ 99ನೇ ಸಭೆಯಲ್ಲಿ, ಜುಲೈ 12 ರಿಂದ ಜುಲೈ 31ರ ವರೆಗೆ ಬಿಳಿಗುಂಡ್ಲುವಿನಲ್ಲಿ ಸಂಚಿತ ನೀರಿನ ಹರಿವನ್ನು ದಿನಕ್ಕೆ 1 ಟಿಎಂಸಿ (ಸರಾಸರಿ 11,500 ಕ್ಯುಸೆಕ್ಸ್ ಹರಿವು) ಇರುವಂತೆ ಕರ್ನಾಟಕವು ತನ್ನ ಜಲಾಶಯಗಳಿಂದ ನೀರಿನ ಬಿಡುಗಡೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಶಿಫಾರಸು ಮಾಡಿದೆ.

ತಮಿಳುನಾಡು ಪರ ಅಧಿಕಾರಿಗಳು CWRC ಗೆ ಮನವಿ ಮಾಡಿ, ಕಳೆದ ಜಲವರ್ಷದಲ್ಲಿ ಕರ್ನಾಟಕ ನೀರು ಸರಿಯಾಗಿ ಹರಿಸಿಲ್ಲ. ಪ್ರಸಕ್ತ ಜಲವರ್ಷದಲ್ಲಿ ಮನ್ಸೂನ್ ಸಾಮಾನ್ಯವಾಗಿದೆ. ಕಾವೇರಿ ಕೊಳ್ಳದ ಡ್ಯಾಂಗಳಲ್ಲಿ ನೀರು ಸಂಗ್ರಹವಾದ ಹಿನ್ನೆಲೆ ನೀರು ಹರಿಸುವಂತೆ ಶಿಫಾರಸು ಮಾಡಿದ್ದಾರೆ.

ಇದಕ್ಕೆ ಪ್ರತಿವಾದ ನಡೆಸಿದ ಕರ್ನಾಟಕದ ಪರ ಅಧಿಕಾರಿ,  ಕಾವೇರಿಯಲ್ಲಿ ನೀರಿನ ಕೊರತೆ ಇದೆ. ಈ ಮಾನ್ಸೂನ್ ಸಾಮಾನ್ಯವಾಗಿಲ್ಲ, ಶೇ, 28 ರಷ್ಟು ಮಳೆ ಕೊರತೆಯಾಗಿದೆ. ಹೀಗಾಗಿ ನೀರು ಬಿಡಲು ಆಗುವುದಿಲ್ಲ ಎಂದು ವಾದ ಮಂಡಿಸಿದ್ದಾರೆ.

ಇನ್ನೂ ಎರಡೂ ರಾಜ್ಯಗಳ ವಾದ-ಪ್ರತಿವಾದ ಆಲಿಸಿದ CWRC, ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments