Webdunia - Bharat's app for daily news and videos

Install App

ಯುಪಿಎ ಸರ್ಕಾರದಿಂದ ಲಾಭ ಪಡೆದ ಉದ್ಯಮಿಗಳ ಹೆಸರು ಬಹಿರಂಗಪಡಿಸಿದ ಬಿಜೆಪಿ

Webdunia
ಶುಕ್ರವಾರ, 23 ಡಿಸೆಂಬರ್ 2016 (13:01 IST)
ಯುಪಿಎ ಸರಕಾರದ ಅವಧಿಯಲ್ಲಿ ದೇಶದ ಖ್ಯಾತ ಕೈಗಾರಿಕೋದ್ಯಮಿಗಳಾದ ಗೌತಮ್ ಆದಾನಿ, ಅನಿಲ್ ಅಂಬಾನಿ, ವಿಜಯ್ ಮಲ್ಯ ಮತ್ತು ಸುನೀಲ್ ಮಿತ್ತಲ್ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಹೆಚ್ಚಿನ ಲಾಭ ಪಡೆದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ, ಸಹರಾ ಮತ್ತು ಬಿರ್ಲಾ ಕಂಪೆನಿಗಳಿಂದ ಕೋಟಿ ಕೋಟಿ ಹಣ ಪಡೆದಿದ್ದಾರೆ ಎನ್ನುವ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದೆ.
 
ಯುಪಿಎ ಸರಕಾರವನ್ನು ಬೆಂಬಲಿಸಿದ ಕೈಗಾರಿಕೋದ್ಯಮಿಗಳಿಂದ 36.5 ಲಕ್ಷ ಕೋಟಿ ರೂಪಾಯಿಗಳ ಬಾಕಿಯನ್ನು ವಸೂಲಿ ಮಾಡಲು ಮೋದಿ ಸರಕಾರ ಕ್ರಮಕೈಗೊಂಡಿದೆ ಎಂದು ಬಿಜೆಪಿ ಹೇಳಿಕೆ ನೀಡಿದೆ.
 
ಗುರುವಾರದಂದು ವಾರಣಾಸಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಹೆಸರನ್ನು ಪ್ರಸ್ತಾಪಿಸದೆ ಯುವನಾಯಕ ಭಾಷಣ ಮಾಡುವುದನ್ನು ಕಲಿಯುತ್ತಿದ್ದಾರೆ ಎಂದು ಲೇವಡಿ ಮಾಡಿದ್ದರು.
 
ಪ್ರಧಾನಿ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಸಹರಾ ಮತ್ತು ಬಿರ್ಲಾ ಸಂಸ್ಥೆಗಳಿಂದ ಒಂಬತ್ತು ಬಾರಿ ಕೋಟಿ ಕೋಟಿ ಹಣ ಸ್ವೀಕರಿಸಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments