Webdunia - Bharat's app for daily news and videos

Install App

ದೇಶದ ಯಾವುದೇ ವಿಮಾನ ನಿಲ್ದಾಣಕ್ಕೂ ಇನ್ನು ಹೆಸರಿರೋದಿಲ್ಲ!

Webdunia
ಶುಕ್ರವಾರ, 10 ಫೆಬ್ರವರಿ 2017 (09:27 IST)
ನವದೆಹಲಿ: ನಮ್ಮ ದೇಶದ ಎಲ್ಲಾ ಅಂತಾರಾಷ್ಟ್ರೀ ವಿಮಾನ ನಿಲ್ದಾಣಗಳಿಗೆ ಒಂದೊಂದು ಗಣ್ಯ ವ್ಯಕ್ತಿಗಳ ಹೆಸರಿದೆ. ಮಾಜಿ ಪ್ರಧಾನಿಗಳಾದ ರಾಜೀವ್ ಗಾಂಧಿ, ಇಂದಿರಾ ಗಾಂಧಿ ಅಲ್ಲದೆ, ಇನ್ನಿತರ ಸಾಧಕರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಲಾಗಿದೆ. ಆದರೆ ಇನ್ನು ಹಾಗಲ್ಲ!

 
ಇನ್ನು ಮುಂದೆ ವಿಮಾನ ನಿಲ್ದಾಣಗಳಿಗೆ ಯಾವುದೇ ರಾಜಕಾರಣಿ ಅಥವಾ ಇನ್ನಿತರ ಸಾಧಕರ ಹೆಸರಿಟ್ಟು ಕರೆಯುವಂತಿಲ್ಲ. ಎಲ್ಲಾ ವಿಮಾನ ನಿಲ್ದಾಣಗಳನ್ನು ಆಯಾ ಊರಿನ ಹೆಸರು ಹಿಡಿದೇ ಹೇಳಬೇಕು. ಹೀಗೊಂದು ಹೊಸ ಮಸೂದೆ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ.

ಈ ಅಧಿವೇಶನ ಅಥವಾ ಮುಂದಿನ  ಅಧಿವೇಶನದಲ್ಲಿ ಇದನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಆದರೆ ಇದರ ಸುದ್ದಿ ತಿಳಿದ ತಕ್ಷಣವೇ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘ ವಿರೋಧಿಸಲು ತೀರ್ಮಾನಿಸಿದೆ. ಎಷ್ಟೋ ಹೋರಾಟ ಮಾಡಿದ ಮೇಲೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಡಲಾಗಿದೆ. ಅದನ್ನು ಇಲ್ಲವಾಗಿಸಿದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಅಶ್ವಥ್ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments