Webdunia - Bharat's app for daily news and videos

Install App

ತಿರುಪತಿ ಲಡ್ಡುವಿನಲ್ಲಿ ನಟ್ಟು, ಬೋಲ್ಟ್, ಪಾನ್'ಪರಾಗ್..? ಇದೆಂಥ ಕಾಲ ಬಂತಪ್ಪ ತಿಮ್ಮಪ್ಪ..!

Webdunia
ಮಂಗಳವಾರ, 15 ನವೆಂಬರ್ 2016 (09:51 IST)
ತಿರುಪತಿ: ಮೂವತ್ತು ವರ್ಷ ಇತಿಹಾಸವಿರುವ ತಿರುಪತಿ ತಿಮ್ಮಪ್ಪನ ಲಡ್ಡುವಿನ ಸ್ವಾದದ ಜತೆಗೆ, ನಟ್ಟು, ಬೋಲ್ಟ್, ಪಾನ್'ಪರಾಗ್'ನಂತಹ ಅನುಪಯುಕ್ತ ವಸ್ತುಗಳು ಸಹ ಪ್ರಸಾದ ರೂಪದಲ್ಲಿ ದೊರೆಯುತ್ತದೆ?

 
ಆಶ್ಚರ್ಯ ಆಯ್ತಾ.. ಹೀಗೊಂದು ಮಾಹಿತಿ ವಾಹಿನಿಯೊಂದು ಹೊರಹಾಕದೆ. ಬಾಯಲ್ಲಿ ನೀರುರಿಸುವ ಲಡ್ಡುವಿನಲ್ಲಿ ಅನುಪಯುಕ್ತ ವಸ್ತುಗಳು ಸೇರುತ್ತಿವೆಯಂತೆ. ಈ ಕುರಿತು ಭಕ್ತರು ಸಹ ಆರೋಪಿಸಿದ್ದಾರೆ ಎನ್ನಲಾಗಿದೆ. ಇದಕ್ಕೆಲ್ಲ ಮುಖ್ಯ ಕಾರಣ ಲಡ್ಡು ತಯಾರಿಕೆ ವೇಳೆ ಸ್ವಚ್ಛತೆ ಕುರಿತು ಗಮನ ಹರಿಸದಿರುವುದು. ಈ ವಿಚಾರ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧವಾಗಿದ್ದು, ಬೆಂಗಳೂರಿನ ವಕೀಲ ನರಸಿಂಹಮೂರ್ತಿ ನ್ಯಾಯಾಂಗ ಹೋರಾಟಕ್ಕೆ ಮುಂದಾಗಿದ್ದಾರೆ.
 
ಲಡ್ಡು ತಯಾರಿಕೆಯಲ್ಲಿ  ಆಹಾರ ಸುರಕ್ಷತಾ ಕಾಯ್ದೆ -2006ರ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಕಳೆದ ಜೂನ್ ತಿಂಗಳಲ್ಲಿ  ದೆಹಲಿಯಲ್ಲಿರುವ ಭಾರತೀಯ ಆಹಾರ ಸುರಕ್ಷತಾ ಪ್ರಾಧಿಕಾರಕ್ಕೆ ದೂರು ಸಲ್ಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಸುರಕ್ಷತಾ ಪ್ರಾಧಿಕಾರ ಆಂಧ್ರಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
 
ಅದರಂತೆ ಆಂಧ್ರ ಸರ್ಕಾರ ತಿರುಪತಿ ತಿಮ್ಮಪ್ಪ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗೆ ಲಡ್ಡು ತಯಾರಿಕಾ ವಿಧಾನದಲ್ಲಿ ಸ್ವಚ್ಛತೆ ಮತ್ತು ಆಹಾರ ಸುರಕ್ಷತಾ ಕಾಯ್ದೆಯ ನಿಯಮಗಳನ್ನು ಪಾಲಿಸಬೇಕೆಂದು ಸೂಚನೆ ನೀಡಿತ್ತು. ಆದರೆ ಆಂಧ್ರ ಸರ್ಕಾರದ ಸೂಚನೆಗೂ ತಿರುಪತಿ ಕಾರ್ಯನಿರ್ವಾಹಕ ಅಧಿಕಾರಿ ಈವರೆಗೆ ಯಾವುದೇ ಉತ್ತರ ನೀಡಿಲ್ಲ. ಈಗ ದೂರುದಾರ ನರಸಿಂಹಮೂರ್ತಿ ತಿರುಪತಿ ತಿಮ್ಮಪ್ಪ ಆಡಳಿತಾಧಿಕಾರಿ ವಿರುದ್ಧ ಲೀಗಲ್ ನೊಟೀಸ್ ಕೊಟ್ಟು ಬಳಿಕ ಹೈಕೋರ್ಟ್​​ನಲ್ಲಿ ರಿಟ್ ಸಲ್ಲಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments