Webdunia - Bharat's app for daily news and videos

Install App

ಓ.ಪನ್ನೀರ್‌ಸೆಲ್ವಂಗೆ ಮತ್ತೊಂದು ಅವಕಾಶ ಸಿಗುವುದು ಡೌಟು..!

Webdunia
ಶುಕ್ರವಾರ, 10 ಫೆಬ್ರವರಿ 2017 (11:52 IST)
ಹೊಸ ಸರಕಾರ ರಚನೆಗೆ ಅವಕಾಶ ನೀಡಲು ರಾಜ್ಯಪಾಲ ವಿದ್ಯಾಸಾಗರ್ ರಾವ್ ಚಿಂತನೆ ನಡೆಸಿದ ಹಿನ್ನೆಲೆಯಲ್ಲಿ ಓ.ಪನ್ನೀರ್‌ಸೆಲ್ವಂಗೆ ಸರಕಾರ ರಚಿಸಲು ಮತ್ತೊಂದು ಅವಕಾಶ ಸಿಗುವುದು ಡೌಟು ಎಂದು ಮೂಲಗಳು ತಿಳಿಸಿವೆ.
 
ಶಶಿಕಲಾ ಅವರಿಗೆ ಸರಕಾರ ರಚಿಸಲು ಅವಕಾಶ ನೀಡಬೇಕಾ ಅಥವಾ ಶಶಿಕಲಾ ವಿರುದ್ಧದ ಪ್ರಕರಣದ ತೀರ್ಪು ಬರುವವರೆಗೂ ಕಾಯಬೇಕಾ ಎನ್ನುವ ಬಗ್ಗೆ ರಾಜ್ಯಪಾಲರು ಇಂದು ಸಂಜೆಯೊಳಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.
 
ನಿನ್ನೆ ಸಂಜೆ ಪನ್ನೀರ್ ಸೆಲ್ವಂ ರಾಜ್ಯಪಾಲರನ್ನು ಭೇಟಿ ಮಾಡಿ ಒತ್ತಾಯಪೂರ್ವಕವಾಗಿ ರಾಜೀನಾಮೆ ನೀಡಿದ್ದೇನೆ. ಇದೀಗ ರಾಜೀನಾಮೆ ಹಿಂಪಡೆಯಲು ಸಿದ್ದ ಎಂದು ಮನವಿ ಸಲ್ಲಿಸಿದ್ದರು. ಶಶಿಕಲಾ ಕೂಡಾ ತಮ್ಮ ಬಳಿ 130 ಶಾಸಕರ ಬೆಂಬಲವಿರುವ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿ ಸರಕಾರ ರಚಿಸಲು ಅಹ್ವಾನ ನೀಡುವಂತೆ ಕೋರಿದ್ದರು.
 
ಪನ್ನೀರ್ ಸೆಲ್ವಂ ಮತ್ತು ಶಶಿಕಲಾ ಅವರ ಮನವಿ ಪತ್ರಗಳನ್ನು ಕಾನೂನು ತಜ್ಞರಿಗೆ ರವಾನಿಸಿದ ರಾಜ್ಯಪಾಲರು ಶೀಘ್ರದಲ್ಲಿಯೇ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments