Webdunia - Bharat's app for daily news and videos

Install App

ಅನೈತಿಕ ಸಂಬಂಧಕ್ಕೆ ಅಡ್ಡಿಎಂದು ಹೀಗಾ ಮಾಡೋದಾ?

Webdunia
ಸೋಮವಾರ, 27 ನವೆಂಬರ್ 2023 (15:20 IST)
ಪತ್ನಿಯರು ಎಷ್ಟೇ ತಡೆದರು ಪತಿಯಂದಿರ ಅಕ್ರಮ ಸಂಬಂಧ ತಡೆಯಲು ಸಾಧ್ಯವಾಗುತ್ತಿಲ್ಲ. ಅಥವಾ ಪತಿಯಂದಿರು ಎಷ್ಟೇ ಪ್ರಯತ್ನ ಪಟ್ಟರು ಪತ್ನಿಯ ಅಫೇರ್‌ಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ.  ಅಕ್ರಮ ಸಂಬಂಧಗಳು ನಿರಂತರವಾಗಿ ನಡೆಯುತ್ತಲೇ ಬಂದಿವೆ. 
 
ಅನೈತಿಕ ಸಂಬಂಧ ಹೊಂದಿದ್ದ ತಾಯಿ, ಪ್ರಿಯಕರನ ಜೊತೆ ಸೇರಿ ತನ್ನ ಒಂದೂವರೆ ವರ್ಷದ ಮಗುವನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ನೆಲೈನಲ್ಲಿ ನಡೆದಿದೆ.
 
ವದಕಾಶಿ (35) ಮಗುವನ್ನು ಕೊಲೆ ಮಾಡಿದ ತಾಯಿ. ವದಕಾಶಿ ತಿರುವೆಂಕಟಂನ ಪಾಲಂಗಿಟಿಯ ನಿವಾಸಿಯಾಗಿರುವ ರಾಜ್ ಎಂಬವರನ್ನು ಮದುವೆಯಾಗಿದ್ದಳು. ಆದರೆ ಈಕೆಗೆ ತನ್ನ ಮನೆಗೆ ಹಾಲು ವಿತರಿಸುತ್ತಿದ್ದ ಸ್ವಾಮಿನಾಥನ್ ಜೊತೆ ಅನೈತಿಕ ಸಂಬಂಧ ಇತ್ತು. ಈ ವಿಚಾರ ತಿಳಿದ ಆಕೆಯ ಪತಿ ತನ್ನ  ಮಗುವನ್ನು ಚಿಕ್ಕಪ್ಪನ ಮನೆಗೆ ಕಳುಹಿಸಿದ್ದನು.
 
ಆದರೆ ವದಕಾಶಿ ತನ್ನ ಮಗುವನ್ನು ಅಲ್ಲಿಂದ ಕರೆದುಕೊಂಡು ಬಂದು ಸ್ವಾಮಿನಾಥನ್ ಮನೆಯಲ್ಲಿ ವಾಸವಾಗಿದ್ದಳು. ಆದರೆ ಮಗು ಹೊಟ್ಟೆ ಹಸಿವು ತಾಳಲಾರದೇ ಜೋರಾಗಿ ಅತ್ತಿದ್ದಕ್ಕೆ ಇಬ್ಬರು ಸೇರಿ ಮಗುವಿಗೆ ಹಿಗ್ಗಾಮಗ್ಗಾ ಹೊಡೆದಿದ್ದಾರೆ. ಇದರ ಪರಿಣಾಮ ಮಗು ಸಾವನಪ್ಪಿದೆ.
 
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು  ತಾಯಿ ಹಾಗೂ ಪ್ರಿಯಕರನ ವಿಚಾರಣೆ ನಡೆಸಿದ ವೇಳೆ ಇಬ್ಬರು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments