Webdunia - Bharat's app for daily news and videos

Install App

ಮಕ್ಕಳಿಂದಲೇ ಇನ್ನಿಲ್ಲದ ಕಿರುಕುಳ: ವೃದ್ಧ ದಂಪತಿ ಕೊನೆಗೆ ಮಾಡಿದ್ದೇನು ನೋಡಿ

Krishnaveni K
ಶುಕ್ರವಾರ, 11 ಅಕ್ಟೋಬರ್ 2024 (12:23 IST)
ಜೈಪುರ: ಕೆಲವರಿಗೆ ಮಕ್ಕಳಿಲ್ಲ ಎಂಬ ಕೊರಗು. ಮತ್ತೆ ಕೆಲವರಿಗೆ ಮಕ್ಕಳಿಂದಲೇ ಕೊರಗು. ರಾಜಸ್ಥಾನದ ಈ ವೃದ್ಧ ದಂಪತಿಯದ್ದೂ ಇದೇ ಕತೆ. ಮಕ್ಕಳಿಂದಲೇ ಇನ್ನಿಲ್ಲದ ಕಿರುಕುಳ ಅನುಭವಿಸಿದ ದಂಪತಿ ಕೊನೆಗೆ ಮಾಡಿದ್ದೇನು ಇಲ್ಲಿ ಓದಿ.

70 ವರ್ಷದ ವೃದ್ಧ ದಂಪತಿಗೆ ಮಕ್ಕಳು ಇನ್ನಿಲ್ಲದಂತೆ ಕಾಟ ಕೊಟ್ಟಿದ್ದಾರೆ. ಅದೂ ಆಸ್ತಿಗಾಗಿ. ಮಕ್ಕಳು, ಸೊಸೆಯಂದಿರು ಸೇರಿಕೊಂಡು ಕೊಲೆ ಬೆದರಿಕೆ ಹಾಕುವ ಮಟ್ಟಿಗೆ ತಲುಪಿದ್ದಾರೆ. ಇದರಿಂದ ಬೇಸತ್ತ ದಂಪತಿ ನೀರಿನ ಟ್ಯಾಂಕರ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಜಾರಿರಾಮ್ ಬಿಷ್ಣೋಯ್ ಮತ್ತು ಚವಾಲಿ ದೇವಿ ಎಂಬ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ಮಕ್ಕಳು ಆಸ್ತಿ ಆಸೆಗಾಗಿ ಇನ್ನಿಲ್ಲದ ಕಾಟ ಕೊಡುತ್ತಿದ್ದರು. ವೃದ್ಧ ದಂಪತಿಯಿಂದ ಆಸ್ತಿ, ಕಾರು ಎಲ್ಲವನ್ನೂ ಕಿತ್ತುಕೊಂಡಿದ್ದ ಮಗ-ಸೊಸೆಯಂದಿರು ಬಳಿಕ ಊಟ ಕೊಡದೇ ಚಿತ್ರಹಿಂಸೆ ನೀಡುತ್ತಿದ್ದರು.

ಒಂದು ವೇಳೆ ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದರೆ ರಾತ್ರಿ ಮಲಗಿದ್ದಾಗಲೇ ಜೀವಂತ ದಹನ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದರು. ಎರಡು ದಿನಗಳಿಂದ ವೃದ್ಧ ದಂಪತಿಯನ್ನು ಕಾಣದೇ ಸ್ಥಳೀಯರು ಮಗನಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಆತ ಪೊಲೀಸರಿಗೆ ಮಾಹಿತಿ ನೀಡಿದಾಗ ಸ್ಥಳೀಯ ಟ್ಯಾಂಕರ್ ಒಂದರಲ್ಲಿ ಮೃತದೇಹ ಸಿಕ್ಕಿದೆ. ಸಾಯುವ ಮುನ್ನ ದಂಪತಿ ಮನೆಯ ಗೋಡೆಯ ಮೇಲೆ ಡೆತ್ ನೋಟ್ ಅಂಟಿಸಿದ್ದರು. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments