Webdunia - Bharat's app for daily news and videos

Install App

ಒಮಿಕ್ರಾನ್ ಆತಂಕ; ಇಂದಿನಿಂದ ಏರ್​ಪೋರ್ಟ್​ಗಳಲ್ಲಿ ಮಾರ್ಗಸೂಚಿ ಜಾರಿ

Webdunia
ಬುಧವಾರ, 1 ಡಿಸೆಂಬರ್ 2021 (10:13 IST)
ದೇವನಹಳ್ಳಿ : ಕೊರೊನಾ ರೂಪಾಂತರಿ ಒಮಿಕ್ರಾನ್ ಆತಂಕ ಹಿನ್ನೆಲೆ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಗಳನ್ನ ಹೊರಡಿಸಿದೆ.
ಇಂದಿನಿಂದ ಏರ್ಪೋರ್ಟ್ಗಳಲ್ಲಿ  ಹೊಸ ಗೈಡ್ಲೈನ್ಸ್ ಜಾರಿಯಾಗಲಿದೆ. ಹೈರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾವಹಿಸಲಾಗುತ್ತದೆ. ಎರಡು ದಿನಗಳ ಹಿಂದೆ ಕೇಂದ್ರ ಸರ್ಕಾರ ವಿದೇಶಿ ಪ್ರಯಾಣಿಕರಿಗೆ ಹೊಸಮಾರ್ಗಸೂಚಿ ಹೊರಡಿಸಿದ್ದು, ಹೈರಿಸ್ಕ್ ದೇಶಗಳಿಂದ ಬಂದವರಿಗೆ ಏರ್ಪೋರ್ಟ್ಗಳಲ್ಲಿ ಕಡ್ಡಾಯವಾಗಿ ಟೆಸ್ಟಿಂಗ್, ಮಾಡಲಾಗುತ್ತದೆ.
ಟೆಸ್ಟಿಂಗ್ ನಂತರ ಪಾಸಿಟಿವ್ ಬಂದರೆ ಆಸ್ಪತ್ರೆಯಲ್ಲಿ ಐಸೋಲೇಷನ್ ಮಾಡಲಾಗುತ್ತದೆ. ನೆಗೆಟಿವ್ ಬಂದರೆ 7 ದಿನಗಳ ಕಾಲ ಹೋಂ ಕ್ವಾರಂಟೈನ್ ಕಡ್ಡಾಯವಾಗಿದೆ. ಬಂದ ಎಲ್ಲಾ ಪ್ರಯಾಣಿಕರ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಹದ್ದಿನ ಕಣ್ಣಿಡಲು ಸರ್ಕಾರ ಸೂಚಿಸಿದೆ.
ಏರ್ಪೋರ್ಟ್ಗಳಲ್ಲಿ ವಿಳಾಸ, ಪೋನ್ ನಂಬರ್ ಪಡೆದುಕೊಂಡು ಕಳಿಸಲಾಗುತ್ತದೆ. ಇನ್ನು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಇದೇ ಮಾರ್ಗಚೂಚಿಗಳು ಅನ್ವಯವಾಗುತ್ತದೆ.
ದೇಶದಿಂದ ಬರುವವರು ಕಳೆದ 14 ದಿನಗಳ ಪ್ರಯಾಣದ ಇತಿಹಾಸವನ್ನು ನೀಡಬೇಕು. ನವೀಕರಿಸಿದ ಮಾರ್ಗಸೂಚಿಗಳಲ್ಲಿ ಹೈರಿಸ್ಕ್ ದೇಶಗಳಿಂದ ಭಾರತಕ್ಕೆ ಬರುವ ಎಲ್ಲಾ ಪ್ರಯಾಣಿಕರು (ಕೊವಿಡ್ ಲಸಿಕೆ ಪಡೆದಿದ್ದರೂ) ಆಗಮನದ ನಂತರ ಕಡ್ಡಾಯವಾಗಿ ಕೊವಿಡ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ವಿಮಾನ ನಿಲ್ದಾಣದಲ್ಲಿ ಹೊರಡುವ 72 ಗಂಟೆಗಳ ಮೊದಲು ಕೊವಿಡ್-19 ಪರೀಕ್ಷೆ ಮಾಡಿಸಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments