Webdunia - Bharat's app for daily news and videos

Install App

ಆಗಸ್ಟ್ 15ರಂದು 'ಬಿಜೆಪಿ ತೊಲಗಿಸಿ, ದೇಶ ಉಳಿಸಿ' ಅಭಿಯಾನಕ್ಕೆ ಚಾಲನೆ - ಮಮತಾ ಬ್ಯಾನರ್ಜಿ

Webdunia
ಭಾನುವಾರ, 22 ಜುಲೈ 2018 (12:46 IST)
ಕೋಲ್ಕತ್ತಾ : ದೇಶದಾದ್ಯಂತ ಜನರನ್ನು ಎಲ್ಲೆಡೆ ಥಳಿಸಲಾಗುತ್ತಿರುವುದನ್ನು ನೋಡಿದರೆ ಬಿಜೆಪಿಯವರು ಜನರಲ್ಲಿ ತಾಲಿಬಾನೀಯರನ್ನು ಸೃಷ್ಟಿಸಲು ಯತ್ನಿಸುತ್ತಿರುವುದು ಸ್ಪಷ್ಟವಾಗಿದೆ ಎಂದು ಹೇಳಿದ ಟಿಎಂಸಿ ನಾಯಕಿ, ಪಶ್ಚಿಮಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆಗಸ್ಟ್ 15ರಂದು 'ಬಿಜೆಪಿ ತೊಲಗಿಸಿ, ದೇಶ ಉಳಿಸಿ' ಎಂಬ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.


ಶನಿವಾರ ನಡೆದ ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರ ಮೆಗಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಸಂಸತ್‌ನ ಒಳಗೆ ಬಿಜೆಪಿಗೆ ವಿಶ್ವಾಸಮತವಿದೆ. ಆದರೆ, ಹೊರಗೆ ಆ ಸಂಖ್ಯೆ ಇಲ್ಲ. ಇತ್ತೀಚೆಗೆ ಬಿಜೆಪಿ ಶಕ್ತಿ ಕ್ಷೀಣಿಸುತ್ತಿದೆ ಎಂದಿದ್ದಾರೆ. ಹಾಗೇ 2019ರ ಲೋಕಸಭಾ ಚುನಾವಣೆ ಎನ್‌ಡಿಎಗೆ ಭಾರೀ ಹೊಡೆತ ನೀಡಲಿದ್ದು ಬಂಗಾಳವು ಇದಕ್ಕೆ ಮುನ್ನುಡಿ ಬರೆಯಲಿದೆ . ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ (ಟಿಎಂಸಿ) ಪಶ್ಚಿಮಬಂಗಾಲದ ಎಲ್ಲಾ 42 ಸ್ಥಾನಗಳಲ್ಲೂ ಗೆಲುವು ಸಾಧಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಜನರನ್ನು ಎಲ್ಲೆಡೆ ಥಳಿಸಲಾಗುತ್ತಿರುವುದನ್ನು ನೋಡಿದರೆ  ಬಿಜೆಪಿಯವರು ಜನರಲ್ಲಿ ತಾಲಿಬಾನೀಯರನ್ನು ಸೃಷ್ಟಿಸಲು ಯತ್ನಿಸುತ್ತಿರುವುದು ಸ್ಪಷ್ಟವಾಗಿದೆ. ಬಿಜೆಪಿ ಮತ್ತು ಆರೆಸ್ಸೆಸ್‌ನಲ್ಲಿರುವ ಕೆಲವು ಉತ್ತಮ ವ್ಯಕ್ತಿಗಳನ್ನು ನಾನು ಗೌರವಿಸುತ್ತೇನೆ. ಆದರೆ ಇತರರು ಕೊಳಕು ಆಟವಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.


ಇದೇ ವೇಳೆ, ಬಿಜೆಪಿ ಮುಖಂಡ ಚಂದನ್‌ ಮಿತ್ರಾ, ಕಾಂಗ್ರೆಸ್‌ನ ನಾಲ್ವರು ಶಾಸಕರು ಸಿಎಂ ಬ್ಯಾನರ್ಜಿ ಸಮ್ಮುಖದಲ್ಲಿ ಟಿಎಂಸಿಗೆ ಸೇರ್ಪಡೆಯಾದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments