Webdunia - Bharat's app for daily news and videos

Install App

ಗಾಂಧಿ ಜಯಂತಿಯಂದು ನಾಥೂರಾಮ್ ಗೋಡ್ಸೆ ಪ್ರತಿಮೆ ಅನಾವರಣ

Webdunia
ಸೋಮವಾರ, 3 ಅಕ್ಟೋಬರ್ 2016 (16:59 IST)
ಸಂಪೂರ್ಣ ದೇಶ ರಾಷ್ಟ್ರಪಿತ ಭಾನುವಾರ ಮಹಾತ್ಮಾ ಗಾಂಧೀಜಿಯವರ 147ನೇ ಜಯಂತಿಯನ್ನು ಆಚರಿಸುತ್ತಿದ್ದರೆ ಬಲಪಂಥೀಯ ಸಂಘಟನೆ ಅಖಿಲ ಭಾರತೀಯ ಹಿಂದೂ ಮಹಾಸಭಾ ಮೀರತ್‌ನಲ್ಲಿ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಪುತ್ಥಳಿಯನ್ನು ಅನಾವರಣಗೊಳಿಸಿದೆ.

 
ಜತೆಗೆ ಗಾಂಧಿ ಜಯಂತಿಯನ್ನು  ಧಿಕ್ಕಾರ್ ದಿವಸ್ ಆಗಿ ಆಚರಿಸಿದೆ. 
 
ಇದು ಗೋಡ್ಸೆಯ ಪ್ರಥಮ ಪ್ರತಿಮೆಯಾಗಿದ್ದು ಶಾರದಾ ರಸ್ತೆಯಲ್ಲಿರುವ ಮಹಾಸಭಾದ ಕಚೇರಿಯಲ್ಲಿ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. 
 
2014ರಲ್ಲಿ ನಾವು ಗೋಡ್ಸೆ ಪ್ರತಿಮೆಯನ್ನು ಸ್ಥಾಪಿಸಲು ಪ್ರಯತ್ನಿಸಿದ್ದೆವು. ಆದರೆ ಪೊಲೀಸರು ಮತ್ತು ಎಡ ಪಂಥೀಯರು ಇದನ್ನು ವಿರೋಧಿಸಿ ಉದ್ದೇಶಿತ ಸ್ಥಳವನ್ನು ಸೀಲ್ ಮಾಡಲಾಯಿತು. ಪ್ರಕರಣ ಕೋರ್ಟ್ ಮೆಟ್ಟಿಲನ್ನು ಸಹ ಏರಿತು.ಈ ಬಾರಿ ನಾವು ಬಹಳ ಎಚ್ಚರಿಕೆಯಿಂದ ಗಾಂಧಿ ಜಯಂತಿಯಂದು ಗೋಡ್ಸೆ ಪ್ರತಿಮೆಯನ್ನು ಅನಾವರಣಗೊಳಿಸಿದೆವು. ಈ ಕಾರ್ಯಕ್ರಮಕ್ಕೆ ಇದಕ್ಕಿಂತ ಉತ್ತಮ ದಿನ ಬೇರೆ ಇರಲಿಲ್ಲ. ಗಾಂಧಿಯವರು ನಡೆದ ಹಾದಿಯನ್ನು ಅನುಸರಿಸುವುದನ್ನು ನಿಲ್ಲಿಸಿ ಎಂದು ದೇಶವಾಸಿಗಳಿಗೆ ತೋರಿಸಲು ಈ  ಮಹತ್ವದ ಹೆಜ್ಜೆಯನ್ನಿಟ್ಟಿದ್ದೇವೆ, ಎಂದು ಹಿಂದೂ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಹೇಳಿದ್ದಾರೆ. 
 
50ಕೆಜಿ ತೂಕದ ಗೋಡ್ಸೆ ಪ್ರತಿಮೆಯನ್ನು ಜೈಪುರದಲ್ಲಿ ತಯಾರಿಸಲಾಗಿದ್ದು  ಹಿಂದೂ ಮಹಾಸಭಾ ಉತ್ತರ ಪ್ರದೇಶದ ಅಧ್ಯಕ್ಷ ಯೋಗೇಂದ್ರ ವರ್ಮಾ ಇದನ್ನು ಮೀರತ್‌ಗೆ ತಂದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

ಮುಂದಿನ ಸುದ್ದಿ
Show comments