Webdunia - Bharat's app for daily news and videos

Install App

ನೋಟು ನಿಷೇಧಕ್ಕೆ ಒಂದು ತಿಂಗಳು; ನಿಂತಿಲ್ಲ ಪರದಾಟ

Webdunia
ಗುರುವಾರ, 8 ಡಿಸೆಂಬರ್ 2016 (09:38 IST)
500 ಹಾಗೂ 10000 ರೂಪಾಯಿನೋಟು ನಿಷೇಧ ಮಾಡಿ ಒಂದು ತಿಂಗಳಾಗಿದ್ದು ಇನ್ನುವರೆಗೂ ಜನರ ಪರದಾಟ ಮಾತ್ರ ಬಹುತೇಕ ಹಾಗೆ ಉಳಿದಿದೆ.ನವೆಂಬರ್ 8 ರ ಮಧ್ಯರಾತ್ರಿ ಕೇಂದ್ರ ಸರ್ಕಾರ 500 ಹಾಗೂ 1,000 ಮುಖಬೆಲೆಯ ನೋಟುಗಳನ್ನು ರದ್ದು ಪಡಿಸಿತ್ತು.
ದೇಶದೆಲ್ಲೆಡೆ ಎಟಿಎಂಗಳ ಮುಂದೆ 'ನೋ ಕ್ಯಾಶ್' ಬೋರ್ಡ್ ನೇತುಹಾಕಿರುವುದೇ ಕಂಡು ಬರುತ್ತಿದೆ
 
ಬ್ಯಾಂಕ್‌‌ಗಳ ಮುಂದೆ, ಎಟಿಎಂಗಳ ಮುಂದೆ ಜನರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಆದರೂ ಎಲ್ಲರಿಗೂ ಹಣ ಸಿಗುತ್ತಿಲ್ಲ. ಸಿಕ್ಕರೂ ಬ್ಯಾಂಕ್‌ಗಳಲ್ಲಿ ನೀಡುತ್ತಿರುವುದು 2,000 ರೂಪಾಯಿ ನೋಟುಗಳಾಗಿರುವುದರಿಂದ ಚಿಲ್ಲರೆಗಾಗಿ ಜನರು ಪರದಾಡುತ್ತಿದ್ದಾರೆ. 
 
ನಮ್ಮ ದುಡ್ಡನ್ನು ಪಡೆಯಲು ನಾವೇ ಪರದಾಡಬೇಕಾಗಿದೆ ಎಂದು ಜನರು ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಈ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ವಿರೋಧ ಪಕ್ಷಗಳ ಆಗ್ರಹ ಸಹ ಮುಂದುವರೆದಿದೆ. 
 
ಕರ್ನಾಟಕದಾದ್ಯಂತ ಒಟ್ಟು 16,929 ಎಟಿಎಂಗಳಿವೆ. ಅದರಲ್ಲಿ  ಕೇವಲ ಶೇ.70 ರಷ್ಟು ಎಟಿಎಂಗಳಲ್ಲಿ ಮಾತ್ರ ಹೊಸ ನೋಟುಗಳನ್ನು ಪಡೆಯಲು ಸಾಧ್ಯವಾಗುತ್ತಿದೆ. ಕೇವಲ ಶೇ. 20  ರಷ್ಟು ಎಟಿಎಂಗಳಲ್ಲಿ ಮಾತ್ರ ಹಣ ತುಂಬಲಾಗುತ್ತದೆ. ಕೆಲವೇ ಕೆಲವು ಎಟಿಎಂ ಗಳಲ್ಲಿ ಮಾತ್ರ 500 ಹಾಗೂ 100 ರು ನೋಟು ಸಿಗುತ್ತಿವೆ, ಉಳಿದಂತೆ ಎಲ್ಲಾ ಎಟಿಎಂ ಗಳಲ್ಲೂ 2 ಸಾವಿರ ರೂಪಾಯಿ ನೋಟುಗಳು ಮಾತ್ರ ಸಿಗುತ್ತಿವೆ. ಹೀಗಾಗಿ ಚಿಲ್ಲರೆಗಾಗಿ ಇನ್ನಿಲ್ಲದ ಪ್ರಯಾಸ ಮುಂದುವರೆದಿದೆ.
 
ಬ್ಯಾಂಕ್, ಎಟಿಎಂಗಳ ಮುಂದೆ ಹಿಂದಿನಂತೆ ಕೀಲೋಮೀಟರ್‌ಗಟ್ಟಲೆ ಸರತಿ ಸಾಲು ಇಲ್ಲವಾದರೂ ಸಾಲಂತೂ ಕರಗಿಲ್ಲ. ಆದರೆ ಹಣಕ್ಕಾಗಿ ಅದರಲ್ಲೂ ಚಿಲ್ಲರೆಗಾಗಿ ಜನರ ಪರದಾಟ ನಿಂತಿಲ್ಲ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ಮುಂದಿನ ಸುದ್ದಿ
Show comments