Webdunia - Bharat's app for daily news and videos

Install App

ಮೋದಿ ಸರ್ಕಾರದ ಒಂದು ದೇಶ ಒಂದೇ ಚಂದಾದಾರಿಕೆ ಯೋಜನೆ: ಇದರಿಂದ ವಿದ್ಯಾರ್ಥಿಗಳಿಗೆ ಹೇಗೆ ಲಾಭವಾಗಲಿದೆ

Krishnaveni K
ಮಂಗಳವಾರ, 26 ನವೆಂಬರ್ 2024 (10:08 IST)
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಚಿವ ಸಂಪುಟ ಒಂದೇ ದೇಶ, ಒಂದೇ ಚಂದಾದಾರಿಕೆ ಯೋಜನೆಗೆ ಹಸಿರು ನಿಶಾನೆ ತೋರಿದೆ. ಇದರಿಂದ ವಿದ್ಯಾರ್ಥಿಗಳಿಗೆ ಉಪಯೋಗವಾಗಲಿದೆ ಎನ್ನಲಾಗಿದೆ. ಇದರ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ.

ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಪ್ರಪಂಚದಾದ್ಯಂತ ಸಂಶೋಧನಾ ಪ್ರಬಂಧಗಳನ್ನು ಮಂಡಿಸಲು ಅನುಕೂಲವಾಗಲಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಅಂದಾಜು 6,000 ಕೋಟಿ ರೂ. ವ್ಯಯಿಸಲಿದೆ.  ಈ ಯೋಜನೆಯಿಂದ ವಿದ್ಯಾರ್ಥಿಗಳು ಹೆಚ್ಚು ಅನುಕೂಲ ಪಡೆಯಲಿದ್ದಾರೆ.

ಒಂದು ರಾಷ್ಟ್ರ ಒಂದು ಚಂದಾದಾರಿಕೆಯಲ್ಲಿ 30 ಪ್ರಮುಖ ಅಂತಾರಾಷ್ಟ್ರೀಯ ಜರ್ನಲ್ ಪ್ರಕಾಶಕರನ್ನು ಸೇರಿಸಲಾಗಿದೆ. ಈ ಪ್ರಕಾಶಕರು ಪ್ರಕಟಿಸಿದ ಸುಮಾರು 13,000 ಇ-ಜರ್ನಲ್ ಗಳನ್ನು ಈಗ 6,300 ಕ್ಕೂ ಹೆಚ್ಚು ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ಕೇಂದ್ರ ಸರ್ಕಾರದ R&D  ಸಂಸ್ಥೆಗಳು ಬಳಸಿಕೊಳ್ಳಬಹುದಾಗಿದೆ.

ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಲು ಜರ್ನಲ್ ಗಳಿಗಾಗಿ ಪ್ರಪಂಚದಾದ್ಯಂತ ಹುಡಕಬೇಕಾಗಿಲ್ಲ. ಬದಲಾಗಿ ಎಲ್ಲವೂ ಒಂದೇ ಕಡೆ ಲಭ್ಯವಾಗಲಿದೆ. ಇನ್ನು, ಅಟಲ್ ಇನ್ನೋವೇಷನ್ ಹೊಸ ಹಂತವನ್ನು ಪ್ರಾರಂಭಿಸಲಾಗುವುದು. ಇದರ ಅಡಿಯಲ್ಲಿ 30 ಹೊಸ ಆವಿಷ್ಕಾರ ಕೇಂದ್ರಗಳನ್ನು ಆರಂಭಿಸಲಾಗುತ್ತದೆ. ಇದರಿಂದ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳುವ ವಿದ್ಯಾರ್ಥಿಗಳು, ಯುವಕರಿಗೆ ಸಹಾಯವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಧರ್ಮಸ್ಥಳದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments