Webdunia - Bharat's app for daily news and videos

Install App

ಒಬ್ಬ ವ್ಯಕ್ತಿಯ ಅಂಗಾಂಗ ದಾನದಿಂದ 8 ಮಂದಿಗೆ ಜೀವದಾನ ಸಾಧ್ಯ : ನರೇಂದ್ರ ಮೋದಿ

Webdunia
ಸೋಮವಾರ, 27 ಮಾರ್ಚ್ 2023 (10:03 IST)
ನವದೆಹಲಿ : ಒಬ್ಬ ವ್ಯಕ್ತಿಯ ಅಂಗಾಂಗ ದಾನದಿಂದ 8ರಿಂದ 9 ಮಂದಿಗೆ ಜೀವದಾನ ಮಾಡಬಹುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜನತೆಗೆ ಅಂಗಾಂಗ ದಾನದ ಮಹತ್ವವನ್ನು ತಿಳಿಸಿದ್ದಾರೆ. ಅಂಗಾಂಗ ದಾನ ಮಾಡುವಂತೆ ನಾಗರಿಕರಿಗೆ ಕರೆ ನೀಡಿದ್ದಾರೆ.
 
ಮನ್ ಕಿ ಬಾತ್ ಮಾಸಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತರರಿಗೆ ಹೊಸ ಜೀವನ ನೀಡುವ ನಿಟ್ಟಿನಲ್ಲಿ ಜನರನ್ನು ಉತ್ತೇಜಿಸಲು ಸರ್ಕಾರವು ಹಲವಾರು ನಿಯಮಗಳನ್ನು ಸಡಿಲಿಸಿದೆ ಎಂದು ತಿಳಿಸಿದ್ದಾರೆ.  ಇಂದು ನಾವು ಆಜಾದಿ ಕಾ ಅಮೃತಕಲ್ ಅನ್ನು ಆಚರಿಸುತ್ತಿದ್ದೇವೆ. ಜೊತೆಗೆ ಹೊಸ ನಿರ್ಣಯಗಳೊಂದಿಗೆ ಮುಂದುವರಿಯುತ್ತಿದ್ದೇವೆ.

ಈಗ ‘ಮನ್ ಕಿ ಬಾತ್’ 99ನೇ ಸಂಚಿಕೆ ಮುಗಿಸಿದ್ದು, 100ನೇ ಸಂಚಿಕೆಗೆ ನಿಮ್ಮೆಲ್ಲರ ಸಲಹೆಗಳನ್ನು ಪಡೆಯಲು ನಾನು ತುಂಬಾ ಉತ್ಸುಕನಾಗಿದ್ದೇನೆ. ನಿಮ್ಮ ಸಲಹೆಗಳು 100 ನೇ ಸಂಚಿಕೆಯನ್ನು ಇನ್ನಷ್ಟು ಸ್ಮರಣೀಯವಾಗಿಸುತ್ತದೆ ಎಂದು ಹೇಳಿದ್ದಾರೆ.

ಅಂಗಾಂಗ ದಾನ ಮಹತ್ವ ಕುರಿತು ಮಾತನಾಡಿದ ಮೋದಿ, ಒಬ್ಬ ವ್ಯಕ್ತಿಯು ಮರಣದ ನಂತರ ತನ್ನ ಅಂಗಗಳನ್ನು ದಾನ ಮಾಡಿದಾಗ, ಅದು 8ರಿಂದ 9 ಜನರಿಗೆ ಹೊಸ ಜೀವನ ನೀಡಲು ಸಾಧ್ಯವಾಗುತ್ತದೆ. ಅಂಗಾಂಗ ದಾನವನ್ನು ಉತ್ತೇಜಿಸಲು, ಇಡೀ ದೇಶದಲ್ಲಿ ಇದೇ ರೀತಿಯ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವುದು ನನಗೆ ತುಂಬಾ ತೃಪ್ತಿ ತಂದಿದೆ ಎಂದಿದ್ದಾರೆ.  ಅಂಗಾಂಗ ದಾನಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರ ಅದಕ್ಕೆ ಸಂಬಂಧಿಸಿದ ಕನಿಷ್ಠ ವಯೋಮಿತಿ ಮತ್ತು ವಾಸಸ್ಥಳ ನಿಯಮವನ್ನು ತೆಗೆದುಹಾಕಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ