Webdunia - Bharat's app for daily news and videos

Install App

ಮರಾಠವಾಡ ಅಣೆಕಟ್ಟುಗಳಲ್ಲಿ ನೆಲ ಮಟ್ಟಕ್ಕಿಳಿದ ನೀರು

Webdunia
ಮಂಗಳವಾರ, 3 ಮೇ 2016 (18:47 IST)
ಭೀಕರ ಬರಗಾಲವನ್ನು ಎದುರಿಸುತ್ತಿರುವ ಮರಾಠವಾಡಾ ಪ್ರದೇಶದ ಪರಿಸ್ಥಿತಿ ದಿನೇ ದಿನೇ ಚಿಂತಾಜನಕವಾಗುತ್ತಿದೆ. ಮಾನ್ಸೂನ್ ಮಳೆಗೆ ಒಂದುವರೆ ತಿಂಗಳು ಬಾಕಿ ಇರುವಾಗಲೇ ಈ ಪ್ರದೇಶದ ಅಣೆಕಟ್ಟುಗಳಲ್ಲಿ ಕೇವಲ 2 ಪ್ರತಿಶತ ನೀರು ಮಾತ್ರ ಉಳಿದುಕೊಂಡಿದೆ.
ಇಲ್ಲಿರುವ 11 ಪ್ರಮುಖ ಅಣೆಕಟ್ಟುಗಳಲ್ಲಿ ನೀರಿನ ಸಂಗ್ರಹ ನೆಲ ಮಟ್ಟಕ್ಕೆ ಕುಸಿದಿದ್ದು, ನೀರಿನ ಹರಿವು ನಿಂತಿದರಿಂದ ನೀರನ್ನು ಎತ್ತಿ ತೆಗೆಯಬೇಕಾಗಿದೆ. ಮಂಜಾರಾ ಮತ್ತು ಲೋವರ್ ತೆರ್ನಾ ಅಣೆಕಟ್ಟುಗಳು ಸಂಪೂರ್ಣವಾಗಿ ಬತ್ತಿ ಹೋಗಿವೆ.
 
ಸತತ ನಾಲ್ಕು ವರ್ಷಗಳಿಂದ ಮರಾಠವಾಡ ಪ್ರದೇಶ ಬರಗಾಲ ಪರಿಸ್ಥಿತಿ ಎದುರಿಸುತ್ತಿದೆ. ಆದರೆ, ಕಳೆದ ವರ್ಷ ಈ ಅವಧಿಯಲ್ಲಿ ಅಣೆಕಟ್ಟುಗಳ ನೀರಿನ ಮಟ್ಟ 10 ಪ್ರತಿಶತದಷ್ಟಿತ್ತು. ಮಾನ್ಸೂನ್ ಮಳೆಯಾಗುವ ಮುಂಚೆ ಈ ಪ್ರದೇಶದ ಅಣೆಕಟ್ಟುಗಳಲ್ಲಿ ನೀರು ಸಂಪೂರ್ಣವಾಗಿ ಖಾಲಿಯಾಗಲಿದೆ ಎಂದು ಮಹಾರಾಷ್ಟ್ರ ರಾಜ್ಯ ಸರಕಾರ ಸೂಚನೆ ನೀಡಿದೆ.  
 
ಪ್ರಸಕ್ತ ವರ್ಷದಲ್ಲಿ ಮುಂಗಾರು ಮಳೆ ಬೇಗ ಸುರಿಯುವ ನಿರೀಕ್ಷೆ ಇದೆ ಎಂದು ಜಲ ಸಂಪನ್ಮೂಲ ಸಚಿವ ಗಿರೀಶ್ ಮಹಾಜನ್ ಭರವಸೆಯನ್ನು ವ್ಯಕ್ತ ಪಡಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments