Webdunia - Bharat's app for daily news and videos

Install App

ಐಸಿಎಸ್ ಪ್ರಮಾಣಿತ ಮುಸ್ಲಿಮರು ಮಾತ್ರ ನಿಜವಾದ ಮುಸ್ಲಿಮರು: ಸ್ವಾಮಿ ವಾಗ್ದಾಳಿ

Webdunia
ಗುರುವಾರ, 7 ಜುಲೈ 2016 (20:34 IST)
ಬಾಂಗ್ಲಾದೇಶದಲ್ಲಿ ವಾರದೊಳಗಾಗಿ ನಡೆದ ಎರಡು ಉಗ್ರರ ದಾಳಿಗಳನ್ನು ತೀವ್ರವಾಗಿ ಖಂಡಿಸಿದ ಬಿಜೆಪಿ ಹಿರಿಯ ನಾಯಕ ಸುಬ್ರಹ್ಮಣ್ಯಂ ಸ್ವಾಮಿ, ಘಟನೆಯಲ್ಲಿ ಐಸಿಎಸ್‌ನಂತಹ ಹೀನ ಸಂಘಟನೆಯ ಕೈವಾಡವಿದೆ ಎಂದು ಆರೋಪಿಸಿದ್ದಾರೆ.  
 
ರಮಜಾನ್ ಹಬ್ಬದ ಸಂದರ್ಭದಲ್ಲಿ ಸ್ಫೋಟ ನಡೆಸಿದ ಉಗ್ರರ ಹೀನ ಕೃತ್ಯದ ಬಗ್ಗೆ ಸಾಮಾಜಿಕ ಅಂತರ್ಜಾಲ ತಾಣವಾದ ಟ್ವಿಟ್ಟರ್‌‌ನಲ್ಲಿ ಖಂಡಿಸಿದ್ದಾರೆ. 
 
ದೇಶದ ಅತಿ ದೊಡ್ಡ ಮೈದಾನದಲ್ಲಿ ರಮಜಾನ್ ಹಬ್ಬದ ನಿಮಿತ್ಯ ಪ್ರಾರ್ಥನೆಗೆ ಸಿದ್ದವಾಗುತ್ತಿರುವಂತೆ ನಡೆದ ಉಗ್ರರ ದಾಳಿಯಲ್ಲಿ ಒಬ್ಬ ಪೊಲೀಸ್ ಪೇದೆ ಮತ್ತು ಇತರ ಮೂವರು ನಾಗರಿಕರು ಬಲಿಯಾಗಿದ್ದರು. 
 
ಕಿಶೋರ್‌ಗಂಜ್ ಜಿಲ್ಲೆಯ ಶೋಲಾಕಿಯಾ ಕ್ರೀಡಾಂಗಣದಿಂದ ಒಂದು ಕಿ.ಮೀ ದೂರವಿರುವ ಅಜೀಮುದ್ದೀನ್ ಹೈಸ್ಕೂಲ್ ಗೇಟ್ ಬಳಿ ನಡೆದ ಘಟನೆಯಲ್ಲಿ ಕನಿಷ್ಠ 13 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
 
ಶೋಲಾಕಿಯಾ ಕ್ರೀಡಾಂಗಣದಲ್ಲಿ ಪ್ರಾರ್ಥನೆ ಸಲ್ಲಿಸಲು 3 ಲಕ್ಷ ಮುಸ್ಲಿಮರು ಸೇರುತ್ತಿದ್ದಂತೆ ಉಗ್ರರು ಗುಂಡಿನ ದಾಳಿ ನಡೆಸಿದಾಗ, ಪೊಲೀಸರು ಉತ್ತರವಾಗಿ ಮರುದಾಳಿ ನಡೆಸಿದ್ದಾರೆ. ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments