Webdunia - Bharat's app for daily news and videos

Install App

ಬುಲೆಟ್ ರೈಲುಗಳಲ್ಲಿ ಮೋದಿಯ ಸೂಟ್-ಬೂಟ್ ಗೆಳೆಯರು ಮಾತ್ರ ಪ್ರಯಾಣಿಸಲು ಸಾಧ್ಯ: ರಾಹುಲ್ ಗಾಂಧಿ

Webdunia
ಶುಕ್ರವಾರ, 29 ಜುಲೈ 2016 (20:22 IST)
ಮುಂಗಾರು ಅಧಿವೇಶನದಲ್ಲಿ ಅಗತ್ಯ ವಸ್ತುಗಳ ದರ ಏರಿಕೆ ಕುರಿತಂತೆ ಪ್ರಧಾನಿ ಮೋದಿಯವರನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, ಬುಲೆಟ್ ರೈಲುಗಳಲ್ಲಿ ಮೋದಿಯವರ ಸೂಟ್-ಬೂಟ್ ಗೆಳೆಯರು ಮಾತ್ರ ಪ್ರಯಾಣಿಸಲು ಸಾಧ್ಯ ಎಂದು ವಾಗ್ದಾಳಿ ನಡೆಸಿದರು. 
 
ಮೋದಿ ಬುಲೆಟ್ ರೈಲುಗಳನ್ನು ತರುವುದಾಗಿ ಘೋಷಿಸಿದ್ದಾರೆ. ಬುಲೆಟ್ ರೈಲು ಟಿಕೆಟ್ ದರ 15 ಸಾವಿರ ರೂಪಾಯಿಗಳಿಗಿಂತ ಕಡಿಮೆಯಿರಲು ಸಾಧ್ಯವಿಲ್ಲ. ಮೋದಿಯವರ ಸೂಟ್-ಬೂಟ್ ಗೆಳೆಯರು ಮಾತ್ರ ಅಂತಹ ರೈಲಿನಲ್ಲಿ ಸಂಚರಿಸಲು ಸಾಧ್ಯ. ಜನಸಾಮಾನ್ಯರಂತು ಅಂತಹ ರೈಲಿನಲ್ಲಿ ಪ್ರಯಾಣಿಸಲು ಸಾಧ್ಯವಿಲ್ಲ ಎಂದರು.
 
ಕೇಂದ್ರದಲ್ಲಿರುವ ಮೋದಿ ಸರಕಾರ ಆರಂಭದಲ್ಲಿ ಮುಂಬೈ ಮತ್ತು ಅಹ್ಮದಾಬಾದ್ ನಡುವೆ ಬುಲೆಟ್ ರೈಲು ಸಂಚಾರಕ್ಕೆ ಯೋಜನೆ ರೂಪಿಸಿದೆ. ಆದರೆ, ಈಗಾಗಲೇ ರೈಲ್ವೆ ಇಲಾಖೆಯ ತಜ್ಞರು ಅದೊಂದು ದುಬಾರಿ ವೆಚ್ಚದ ಯೋಜನೆ ಎಂದು ಟೀಕಿಸಿದ್ದಾರೆ ಎಂದು ಕಿಡಿಕಾರಿದರು.
 
ದೇಶದ ಕಟ್ಟಕಡೆಯ ಬಡವನನ್ನು ಜೊತೆಯಾಗಿ ಕರೆದುಕೊಂಡು ಹೋಗಬೇಕು ಎನ್ನುವುದೇ ಕಾಂಗ್ರೆಸ್ ಪಕ್ಷದ ಮುಖ್ಯ ಧ್ಯೇಯ. ಮೋದಿ ಶ್ರೀಮಂತರಿಂದ ಕಾರ್ಯಾರಂಭ ಮಾಡುತ್ತಾರೆ. ಆದರೆ, ಕಾಂಗ್ರೆಸ್ ಅತಿ ಬಡವನಿಂದ ಕಾರ್ಯಾರಂಭ ಮಾಡುತ್ತದೆ ಎಂದು ತಿರುಗೇಟು ನೀಡಿದರು.
 
ಕಳೆದ 27 ವರ್ಷಗಳ ಅವಧಿಯಲ್ಲಿ ಉತ್ತರಪ್ರದೇಶ ತೀರಾ ಹಿಂದುಳಿದಿದೆ. ಎರಡವರೆ ದಶಕಗಳವರೆಗೆ ಆಳಿದ ಪಕ್ಷಗಳು ರಾಜ್ಯವನ್ನು ಛಿದ್ರಗೊಳಿಸಿವೆ. ಉತ್ತರಪ್ರದೇಶವನ್ನು ದೇಶದಲ್ಲಿಯೇ ನಂಬರ್ ಒನ್ ರಾಜ್ಯವಾಗಿಸಬೇಕು ಎನ್ನುವುದೇ ನಮ್ಮ ಕನಸಾಗಿದೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

ಗಡಿಯಲ್ಲಿ ಮತ್ತೆ ಪಾಕ್‌ ಕಿರಿಕ್‌: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಶೀಘ್ರದಲ್ಲೇ ಮೂರು ತಿಂಗಳ ಗೃಹಲಕ್ಷ್ಮಿ ಹಣ ರಿಲೀಸ್‌: ಸಚಿವೆ ಹೆಬ್ಬಾಳ್ಕರ್ ಹೇಳಿದ್ದೇನು

ಭಾರತ ಬಿಟ್ಟು ತೊಲಗಿ ಆದೇಶ: ಅಟ್ಟಾರಿ-ವಾಘಾ ಗಡಿಯಲ್ಲಿ 786 ಪಾಕ್‌ ಪ್ರಜೆಗಳಿಗೆ ಗೇಟ್‌ಪಾಸ್‌

ಮುಂದಿನ ಸುದ್ದಿ
Show comments