Webdunia - Bharat's app for daily news and videos

Install App

ಒಂದೇ ಒಂದು ಪಕ್ಷದಲ್ಲಿ ಹೇರಳ ಹಣವಿದೆ: ಬಿಜೆಪಿಗೆ ಶಿವಸೇನೆ ಪರೋಕ್ಷ ಟಾಂಗ್

Webdunia
ಸೋಮವಾರ, 23 ಅಕ್ಟೋಬರ್ 2017 (17:00 IST)
ದೇಶದ ರಾಜಕೀಯ ಪಕ್ಷಗಳಲ್ಲಿ ಒಂದೇ ಪಕ್ಷದಲ್ಲಿ ಮಾತ್ರ ಅನಿಗದಿತ ಹಣವಿದೆ. ಗೋವಾ, ಮಣಿಪುರ ರಾಜ್ಯಗಳಲ್ಲಿ ಮತದಾರರು ತಿರಸ್ಕರಿಸಿದ್ದರೂ ಹಣದ ಬಲದಿಂದ ಅಧಿಕಾರದ ಚುಕ್ಕಾಣಿ ಹಿಡಿದಿದೆ ಎಂದು ಶಿವಸೇನೆ ಪರೋಕ್ಷವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. 
ಬಿಜೆಪಿ ಪಕ್ಷ ಹಣದ ಬಲದಿಂದ ಶಿವಸೇನೆಯನ್ನು ಛಿದ್ರ ಛಿದ್ರಗೊಳಿಸಲು ಪ್ರಯತ್ನಿಸಿದೆ. ನೋಟು ನಿಷೇಧದ ನಂತರ ಆರ್ಥಿಕತೆಯಲ್ಲಿ ಕುಸಿತವಾಗಿದ್ದರೂ ಒಂದು ಪಕ್ಷ  ಮಾತ್ರ ಹಣದ ಬಲದಿಂದ ಗೋವಾ, ಮಣಿಪುರ ರಾಜ್ಯಗಳಲ್ಲಿ ಮತದಾರರು ತಿರಸ್ಕರಿಸಿದ್ದರೂ ಅಧಿಕಾರದ ಚುಕ್ಕಾಣಿ ಹಿಡಿದಿದೆ ಎಂದು ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಟೀಕಿಸಲಾಗಿದೆ.
 
ಕಳೆದ ವರ್ಷದ ಮಾರ್ಚ್ ತಿಂಗಳಲ್ಲಿ ಬಿಜೆಪಿ ಪಕ್ಷ ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ಸರಕಾರ ರಚಿಸಿತ್ತು. ಹಣದ ಬಲದಿಂದ ಕುದುರೆ ವ್ಯಾಪಾರವನ್ನು ಯಾವ ಪಕ್ಷ ನಡೆಸುತ್ತಿದೆ ಎನ್ನುವುದನ್ನು ಜನತೆ ಗಮನಿಸುತ್ತಿದ್ದಾರೆ ಎಂದು ಕಿಡಿಕಾರಿದೆ.
 
ಶಿವಸೇನೆಯನ್ನು ಕೂಡಾ ಹಣದ ಬಲದಿಂದ ಖರೀದಿಸಲು ನಮ್ಮ ಹಿರಿಯ ಮಿತ್ರಪಕ್ಷ ಪ್ರಯತ್ನಿಸಿದೆ. ಆದರೆ, ಸಫಲವಾಗಿಲ್ಲ. ಒಂದು ವೇಳೆ ಶಿವಸೇನೆ ಸರಕಾರದಿಂದ ಬೆಂಬಲ ಹಿಂಪಡೆದರೂ ಸರಕಾರ ಸ್ಥಿರವಾಗಿರಲು ಬೆಂಬಲ ನೀಡಲಿದೆ ಎಂದು ಶಿವಸೇನೆ ಮುಖವಾಣಿ ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments