ಎರಡು ಬಾರಿ ನಮಾಜ್ಗೆ ಮಾತ್ರ ಅವಕಾಶ : ಸುಪ್ರೀಂ

Webdunia
ಬುಧವಾರ, 31 ಆಗಸ್ಟ್ 2022 (07:46 IST)
ನವದೆಹಲಿ : “ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾ ಸ್ಥಿತಿ ಕಾಯ್ದುಕೊಳ್ಳಿ. ವಿವಾದ ಇತ್ಯರ್ಥಕ್ಕೆ ಮತ್ತೆ ಹೈಕೋರ್ಟ್ಗೆ ಹೋಗಿ” – ಇದು ಸುಪ್ರೀಂ ನೀಡಿದ ಆದೇಶದ ಸಾರ.
 
ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿಸಬೇಕಾ ಬೇಡ್ವಾ ಅನ್ನೋ ವಿಚಾರಕ್ಕೆ ಸುಪ್ರೀಂಕೋರ್ಟ್ನಲ್ಲಿ ನಡೆದ ವಿಚಾರಣೆ ಭಾರೀ ಕುತೂಹಲಕ್ಕೆ ಎಡೆಮಾಡಿಕೊಟ್ಟಿತ್ತು. ಕೊನೆಗೆ ಸುಪ್ರೀಂ ಕೋರ್ಟ್ ಈದ್ಗಾ ಮೈದಾನದಲ್ಲಿ ಯಥಾ ಸ್ಥಿತಿ ಕಾಯ್ದುಕೊಳ್ಳಿ ಎಂದು ಆದೇಶ ಪ್ರಕಟಿಸಿತು.

ಚಾಮರಾಜಪೇಟೆ ಮೈದಾನದ ಗಣೇಶೋತ್ಸವ ಆಚರಣೆ ಅನುಮತಿ ನೀಡುವುದು ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ ಎಂದು ಹೈಕೋರ್ಟ್ ದ್ವಿಸದಸ್ಯ ಪೀಠ ನೀಡಿದ ಆದೇಶವನ್ನು ಪ್ರಶ್ನಿಸಿ ವಕ್ಫ್ ಬೋರ್ಡ್ ಸುಪ್ರೀಂ ಮೆಟ್ಟಿಲೇರಿತ್ತು.

ಮೊದಲು ಈ ಅರ್ಜಿಯ ವಿಚಾರಣೆ ನ್ಯಾ. ಹೇಮಂತ್ ಗುಪ್ತಾ ಮತ್ತು ನ್ಯಾ. ಸುಧಾಂಶು ಧುಲಿಯಾ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ಮಧ್ಯಾಹ್ನ ಸುಮಾರು ಒಂದೂವರೆ ಗಂಟೆ ಕಾಲ ವಿಚಾರಣೆ ನಡೆಯಿತು.

ಆದರೆ ಗಣೇಶೋತ್ಸವಕ್ಕೆ ಅನುಮತಿಸಬೇಕಾ ಬೇಡ್ವಾ ಎಂಬ ವಿಚಾರವಾಗಿ ನ್ಯಾಯಮೂರ್ತಿಗಳಲ್ಲೇ ಭಿನ್ನ ಅಭಿಪ್ರಾಯಗಳು ವ್ಯಕ್ತವಾದ ಕಾರಣ, ಪ್ರಕರಣ ವಿಚಾರಣೆಯನ್ನು ಮುಖ್ಯ ನ್ಯಾಯಾಧೀಶರ ಪೀಠಕ್ಕೆ ವರ್ಗಾವಣೆ ಮಾಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments