Webdunia - Bharat's app for daily news and videos

Install App

ಪ್ರವಾಸಕ್ಕೆ ಮುಕ್ತ ಆಹ್ವಾನ

Webdunia
ಮಂಗಳವಾರ, 19 ಏಪ್ರಿಲ್ 2022 (11:41 IST)
ಕೋವಿಡ್ ಕಾರಣಕ್ಕೆ ನಿಂತುಹೋಗಿದ್ದ ಪ್ರವಾಸೋದ್ಯಮಕ್ಕೆ ಮರುಜೀವ ನೀಡುವ ನಿಟ್ಟಿನಲ್ಲಿ ಆಸ್ಪ್ರೇಲಿಯಾ ಬೆಂಗಳೂರಿನ ಪ್ರವಾಸಿಗರಿಗೆ ಮುಕ್ತ ಆಹ್ವಾನ ನೀಡಿದೆ.
 
ಈ ನಿಟ್ಟಿನಲ್ಲಿ ಆಸ್ಪ್ರೇಲಿಯಾದ ಕ್ವಾಂಟಾಸ್ ಮತ್ತು ಏರ್ ಇಂಡಿಯಾ ವಿಮಾನಗಳು, ಬೆಂಗಳೂರಿನಿಂದ ಆಸ್ಪ್ರೇಲಿಯಾಕ್ಕೆ ತಡೆ ರಹಿತ ನೇರ ವಿಮಾನಯಾನವನ್ನು ಶೀಘ್ರವೇ ಆರಂಭಿಸಲಿವೆ. ಇದು ಆಸ್ಪ್ರೇಲಿಯಾ ಪ್ರವಾಸೋದ್ಯಮ ಬೆಳವಣಿಗೆಯ ದೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸಿದೆ.

ಆಸ್ಪ್ರೇಲಿಯಾದ ಕ್ವಾಂಟಾಸ್ ವಿಮಾನ ಸೆಪ್ಟೆಂಬರ್ 14, 2022ರಿಂದ ಬೆಂಗಳೂರಿಂದ ಸಿಡ್ನಿಗೆ ತಡೆರಹಿತ ಹಾರಾಟ ಮಾಡಲಿದೆ. ದೇಶಾದ್ಯಂತದ ಇತರ ಮಹಾನಗರಗಳಿಂದ ಆಸ್ಪ್ರೇಲಿಯಾಗೆ ತಡೆರಹಿತ ಹಾರಾಟಕ್ಕೆ ಕ್ವಾಂಟಾಸ್ ಯೋಜನೆ ರೂಪಿಸುತ್ತಿದೆ.

ಇದರ ಜೊತೆಗೆ ಆಸ್ಪ್ರೇಲಿಯಾದಲ್ಲಿ ರಜೆಯನ್ನು ಆನಂದಿಸಲು ಬಯಸುವವರಿಗೆ ಮತ್ತೊಂದು ಅವಕಾಶವನ್ನು ಆಸ್ಪ್ರೇಲಿಯಾ ಪ್ರವಾಸೋದ್ಯಮ ನೀಡಿದೆ. ಕೋವಿಡ್ ಅವಧಿಯಲ್ಲಿ ಆಸ್ಪ್ರೇಲಿಯಾ ಪ್ರವಾಸಕ್ಕೆ ವೀಸಾ ಪಡೆದಿದ್ದು, ಕೋವಿಡ್ ನಿರ್ಬಂಧದ ಕಾರಣ ಈ ಪ್ರವಾಸ ಸಾಧ್ಯವಾಗದೇ ಹೋಗಿದ್ದರೆ ನೀವೀಗ ಉಚಿತವಾಗಿ ವೀಸಾದ ಅವಧಿ ವಿಸ್ತರಣೆಗೆ ಅರ್ಜಿ ಸಲ್ಲಿಸಬಹುದು.

20 ಮಾಚ್ರ್ 2020ರಿಂದ 30 ಜೂನ್ 2022 ನಡುವೆ ವೀಸಾ ಅವಧಿ ಮುಗಿದಿರುವ, ಮುಕ್ತಾಯಗೊಳ್ಳುತ್ತಿರುವ ಪ್ರವಾಸಿಗರಿಗೆ ವೀಸಾ ಅರ್ಜಿಯ ಶುಲ್ಕ ಮನ್ನಾ ಮಾಡಲು ಆಸ್ಪ್ರೇಲಿಯಾ ಪ್ರವಾಸೋದ್ಯಮ ನಿರ್ಧರಿಸಿದೆ. ಹೀಗಾಗಿ ಆಸ್ಪ್ರೇಲಿಯಾದಲ್ಲಿ ರಜೆ ಕಳೆಯುವ ಕನಸನ್ನು ಈಗ ನನಸಾಗಿಸಿಕೊಳ್ಳಬಹುದು. ಇದಕ್ಕೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ 50 ಶೇಕಡಾ ಸುಂಕದ ಬರೆ ಹಾಕಿದ ಡೊನಾಲ್ಡ್ ಟ್ರಂಪ್

ಭುವನೇಶ್ವರ: ಸ್ನೇಹಿತನಿಂದ ಬ್ಲ್ಯಾಕ್‌ಮೇಲ್‌: ಹೆದರಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹೆಲ್ಮೆಟ್ ಇಲ್ಲದೆ, ಪೆಟ್ರೋಲ್ ಇಲ್ಲ: ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಸವಾರ ಮಾಡಿದ ಕಸರತ್ತು ವೈರಲ್

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಮುಂದಿನ ಸುದ್ದಿ
Show comments