Webdunia - Bharat's app for daily news and videos

Install App

ಆಪರೇಷನ್ ಕಮಲ ಭಯ: ಕರ್ನಾಟಕಕ್ಕೆ ಬಂದ ಗುಜರಾತ್ ಕೈ ಶಾಸಕರು

Webdunia
ಶನಿವಾರ, 29 ಜುಲೈ 2017 (09:55 IST)
ಬೆಂಗಳೂರು: ಗುಜರಾತ್ ನಲ್ಲಿ ಕಾಂಗ್ರೆಸ್ ನಾಯಕ ವಘೇಲಾ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಪಾಳಯ ಸೇರಿಕೊಂಡ ಮೇಲೆ ಮತ್ತಷ್ಟು ಶಾಸಕರು ಬಿಜೆಪಿ ಸೇರಬಹುದೆಂಬ ಭೀತಿಯಲ್ಲಿ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ವಲಸೆ ಬಂದಿದ್ದಾರೆ.


ಇದರೊಂದಿಗೆ ಮತ್ತೊಂದು ರೆಸಾರ್ಟ್ ರಾಜಕಾರಣ ಶುರುವಾಗಿದೆ. ಈ ವರ್ಷಾಂತ್ಯದಲ್ಲಿ ಪ್ರಧಾನಿ ಮೋದಿ ತವರು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತಷ್ಟು ಕೈ ಶಾಸಕರನ್ನು ಬಿಜೆಪಿ ಸೆಳೆದುಕೊಳ್ಳಬಹುದು ಎಂಬ ಭಯದಲ್ಲಿರುವ ಕೈ ಪಾಳಯ ಕರ್ನಾಟಕದ ರೆಸಾರ್ಟ್ ಒಂದರಲ್ಲಿ ಪಕ್ಷದ  ಶಾಸಕರನ್ನು ಇರಿಸಿದೆ.

ಇಂದು ಬೆಳಗ್ಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಶಾಸಕರನ್ನು ಡಿ.ಕೆ. ಶಿವಕುಮಾರ್ ಸಹೋದರ ಸಂಸದ ಡಿಕೆ ಸುರೇಶ್ ಬರಮಾಡಿಕೊಂಡು ರೆಸಾರ್ಟ್ ಗೆ ಕರೆದೊಯ್ದಿದ್ದಾರೆ. ಆಪರೇಷನ್ ಕಮಲಕ್ಕೆ ಬಲಿಯಾಗುವ ಆತಂಕದಲ್ಲಿರುವ ಕೈ ಶಾಸಕರು ಕೆಲವು ದಿನಗಳ ಮಟ್ಟಿಗೆ ಇಲ್ಲಿಯೇ ಉಳಿದುಕೊಳ್ಳಲಿದ್ದಾರೆ.

ಬಿಹಾರ ರಾಜ್ಯವನ್ನೂ ತಮ್ಮ ತೆಕ್ಕೆಗೆ ಎಳೆದುಕೊಳ್ಳಲು ಯಶಸ್ವಿಯಾಗಿರುವ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಂತ್ರ ಗುಜರಾತ್ ನಲ್ಲೂ ಫಲ ಕೊಡಬಹುದೆಂಬ ಭೀತಿಯಲ್ಲಿ ಕೈ ಶಾಸಕರಿದ್ದಾರೆ.

ಇದನ್ನೂ ಓದಿ..  ಅಭಿಮಾನಿಗಳ ಆಕ್ರೋಶದ ನಡುವೆಯೇ ಅರ್ಧಶತಕ ದಾಖಲಿಸಿದ ಅಭಿನವ್ ಮುಕುಂದ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments