Webdunia - Bharat's app for daily news and videos

Install App

Operation Kellar: ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದ ಮೂವರು ಉಗ್ರರು ಫಿನಿಶ್

Krishnaveni K
ಮಂಗಳವಾರ, 13 ಮೇ 2025 (14:04 IST)
Photo Credit: X
ಜಮ್ಮು ಕಾಶ್ಮೀರ: ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ ನಾಲ್ವರು ಉಗ್ರರ ಪೈಕಿ ಮೂವರನ್ನು ಭಾರತೀಯ ಸೇನೆ ಕೊಂದು ಹಾಕಿದೆ. ಇದನ್ನು ಸ್ವತಃ ಭಾರತೀಯ ಸೇನೆ ಖಚಿತಪಡಿಸಿದೆ.

ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಅಡಗಿದ್ದ ಉಗ್ರರನ್ನು ಭಾರತೀಯ ಸೇನೆ ಹುಡುಕಿ ನುಗ್ಗಿ ಕೊಂದಿದೆ. ಆಪರೇಷನ್ ಕೆಲ್ಲರ್ ನಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ. ಈ ಪೈಕಿ ಇಬ್ಬರ ಹೆಸರುಗಳನ್ನು ಸೇನೆ ಬಹಿರಂಗಪಡಿಸಿದೆ.

ಹತರಾದ ಉಗ್ರರ ಪೈಕಿ ಶಾಹಿದ್, ಅದ್ನಾನ್ ಶಫಿ ಎಂಬ ಇಬ್ಬರು ಉಗ್ರರ ಹೆಸರು ಬಹಿರಂಗವಾಗಿದೆ. ಇನ್ನೊಬ್ಬಾತನ ವಿವರ ಕಲೆ ಹಾಕಲಾಗುತ್ತಿದೆ. ಇದೀಗ ನಾಲ್ಕನೇ ಉಗ್ರನ ಮಾಹಿತಿಯನ್ನು ಸೇನೆ ಕಲೆ ಹಾಕಿದ್ದು ಹುಡುಕಾಟ ನಡೆಸುತ್ತಿದೆ.

ಪಹಲ್ಗಾಮ್ ನಲ್ಲಿ ಪ್ರವಾಸಕ್ಕೆಂದು ಬಂದಿದ್ದ ಹಿಂದೂಗಳನ್ನು ಅವರ ಧರ್ಮ ಕೇಳಿ ಈ ನಾಲ್ವರು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದರು. ಇದಾದ ಬಳಿಕ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಉಗ್ರರ ಅಡಗುದಾಣಗಳ ಮೇಲೆ ಬಾಂಬ್ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಸೇನೆ ದಾಳಿ ನಡೆಸಿತ್ತು. ಇದರಿಂದಾಗಿ ಎರಡೂ ದೇಶಗಳ ನಡುವೆ ಯುದ್ಧದ ವಾತಾವರಣ ಮೂಡಿತ್ತು. ಇದೀಗ ಕದನ ವಿರಾಮ ಘೋಷಿಸಲಾಗಿದ್ದು ಈ ನಡುವೆ ಭಾರತೀಯ ಸೇನೆ ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ ಉಗ್ರರನ್ನು ಕೊಂದು ಹಾಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

PM Modi: ಆದಂ ಪುರ ವಾಯುನೆಲೆಗೆ ಮೋದಿ ಸರ್ಪ್ರೈಸ್ ಭೇಟಿ, ಸೆಲ್ಫೀಗೆ ಪೋಸ್

ಹಿಂದೂಗಳನ್ನು ಕೊಂದು ಕೋಲ್ಕತ್ತಾ ವಶಪಡಿಸಿಕೊಳ್ತೇನೆ ಎಂದ ಬಾಂಗ್ಲಾದೇಶ ಇಸ್ಲಾಮಿಸ್ಟ್ ವಿಡಿಯೋ

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

ಹೊರನಾಡು ಬಳಿಕ ಮಂತ್ರಾಲಯದಿಂದ ದೇಶ ರಕ್ಷಣೆಗೆ ಲಕ್ಷ ಲಕ್ಷ ದೇಣಿಗೆ

ಬ್ರಹ್ಮೋಸ್ ಕ್ರೆಡಿಟ್ ನಮ್ಮದು ಎಂದ ಕಾಂಗ್ರೆಸ್: ಮುಂಬೈ ಉಗ್ರ ದಾಳಿಯಾದಾಗ ಆಯುಧ ಪೂಜೆಗಿಡಲಾಗಿತ್ತಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments