Webdunia - Bharat's app for daily news and videos

Install App

Operation Sindoor: ಮೋದಿಗೆ ಹೇಳಿ ಎಂದಿದ್ದಕ್ಕೆ ತಕ್ಕ ಉತ್ತರ ಕೊಟ್ಟ ಮೋದಿ

Krishnaveni K
ಬುಧವಾರ, 7 ಮೇ 2025 (07:07 IST)
ಜಮ್ಮು ಕಾಶ್ಮೀರ: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಭಾರತ ತಕ್ಕ ಪ್ರತೀಕಾರ ತೀರಿಸಿಕೊಂಡಿದೆ. 9 ಕಡೆ ತಡರಾತ್ರಿ ಏರ್ ಸ್ಟ್ರೈಕ್ ನಡೆಸಿ ಪಾಕಿಸ್ತಾನಕ್ಕೆ ತಿರುಗೇಟು ನೀಡಿದೆ. ಈ ಮೂಲಕ ಪಹಲ್ಗಾಮ್ ದಾಳಿ ಸಂದರ್ಭ ಮೋದಿಗೆ ಹೋಗಿ ಹೇಳು ಎಂದಿದ್ದಕ್ಕೆ ಮೋದಿ ಸರಿಯಾಗಿಯೇ ಪ್ರತ್ಯುತ್ತರ ನೀಡಿದ್ದಾರೆ.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ 9 ಕಡೆ ಭಾರತ ನಿನ್ನೆ ತಡರಾತ್ರಿ ಏರ್ ಸ್ಟ್ರೈಕ್ ಮಾಡಿ ಉಗ್ರರ ಮಾರಣಹೋಮ ನಡೆಸಿದೆ. ಇದರಲ್ಲಿ ಬಹಲ್ವಾಪುರ್ ಒಂದೇ ಕಡೆ 30 ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಲಾಗಿದೆ ಎನ್ನಲಾಗುತ್ತಿದೆ.

ಪಹಲ್ಗಾಮ್ ನಲ್ಲಿ ಉಗ್ರರು ಅಮಾಯಕ ಹಿಂದೂ ಪ್ರವಾಸಿಗರನ್ನು ಟಾರ್ಗೆಟ್ ಮಾಡಿ ಗುಂಡಿನ ದಾಳಿ ನಡೆಸಿ ಕೊಲೆ ಮಾಡಿದ್ದರು. ಕನ್ನಡಿಗ ಮಂಜುನಾಥ್ ಎಂಬವರನ್ನು ಹತ್ಯೆ ಮಾಡಿದ ಬಳಿಕ ಉಗ್ರನ ಬಳಿ ಮಂಜುನಾಥ್ ಪತ್ನಿ ಮತ್ತು ಪುತ್ರ ನಮ್ಮನ್ನೂ ಸಾಯಿಸಿ ಎಂದಿದ್ದಕ್ಕೆ ಇಲ್ಲ ಹೋಗಿ ಮೋದಿಗೆ ಹೇಳು ಎಂದಿದ್ದನಂತೆ.

ಇದೀಗ ಮೋದಿ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಪಹಲ್ಗಾಮ್ ನಲ್ಲಿ ಉಗ್ರ ದಾಳಿಯಾದ ಬಳಿಕ ಪ್ರತೀ ಭಾರತೀಯನ ರಕ್ತ ಪ್ರತೀಕಾರಕ್ಕಾಗಿ ಕುದಿಯುತ್ತಿದೆ. ಇದಕ್ಕೆ ತಕ್ಕ ಉತ್ತರ ನೀಡಿಯೇ ನೀಡುತ್ತೇವೆ ಎಂದಿದ್ದರು. ಅದರಂತೆ ಈಗ ಉಗ್ರರ ಹುಟ್ಟಡಗಿಸಲು ದಾಳಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

India Pakistan: ಶಾಂತಿ ಕಾಪಾಡಿ ಎಂದು ಸಲಹೆ ಕೊಟ್ಟ ಚೀನಾಗೆ ತಕ್ಕ ಉತ್ತರ ಕೊಟ್ಟ ಅಜಿತ್ ದೋವಲ್

ಅಮ್ಮಂದಿರ ದಿನಕ್ಕೆ ತಾಯಿಗೆ ವಿಶೇಷ ವಿಡಿಯೋ ಮೂಲಕ ವಿಶ್ ಮಾಡಿದ ಡಿಕೆ ಶಿವಕುಮಾರ್

ಬೆಂಗಳೂರಿನಲ್ಲಿರುವ ಬಂದರು ಪಾಕಿಸ್ತಾನದಿಂದ ಉಡೀಸ್: ಅಬ್ಬಾ ಪಾಕಿಸ್ತಾನಿಯರ ಬುದ್ಧಿವಂತಿಕೆಯೇ..

India Pakistan: ಎಲ್ಲರೂ ಇಂದಿರಾ ಗಾಂಧಿಯಾಗಲು ಸಾಧ್ಯವಿಲ್ಲ, ಮೋದಿಗೆ ಟೀಕೆ

ಮುಂದಿನ ಸುದ್ದಿ
Show comments