Operation Sindoor: ಸಿಂಧೂರ ಕಸಿದವನು ತನ್ನ ಕುಟುಂಬ ಕಳೆದುಕೊಂಡಿದ್ದಾನೆ ಎಂದ ಯೋಗಿ ಆದಿತ್ಯನಾಥ್‌

Sampriya
ಬುಧವಾರ, 7 ಮೇ 2025 (22:23 IST)
Photo Courtesy X
ಲಖನೌ: ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಿಒಕೆಯ ಉಗ್ರರ ಅಡಗು ತಾಣಗಳ ಮೇಲೆ ಭಾರತೀಯ ಸೇನಾ ಪಡೆ ನಡೆಸಿದ ದಾಳಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕ್‌ ಮತ್ತು ಪಿಒಕೆಯ ಉಗ್ರರ ಅಡಗು ತಾಣಗಳ ಮೇಲೆ ಭಾರತೀಯ ಸೇನಾ ಪಡೆ ನಡೆಸಿದ ದಾಳಿಗೆ ಯೋಗಿ ಆದಿತ್ಯನಾಥ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಪರೇಷನ್‌ ಸಿಂಧೂರ ನಡೆಸಿದ್ದಕ್ಕೆ ಪ್ರಧಾನಿ ಮೋದಿ ಮತ್ತು ಭಾರತೀಯ ಮೂರು ಸೇನಾ ಪಡೆಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.  

ನಮ್ಮ ಸಹೋದರಿಯರ ಗಂಡಂದಿರನ್ನು ಕೊಂದವರು, ಈಗ ಭಾರತದ ಕ್ಷಿಪಣಿ ದಾಳಿಯಲ್ಲಿ ತಮ್ಮ ಇಡೀ ಕುಟುಂಬವನ್ನು ಕಳೆದುಕೊಂಡಿದ್ದಾರೆ ಎಂದು ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ. ಭಾರತ ನಡೆಸಿದ ದಾಳಿಯಲ್ಲಿ ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಎಂಬಾತ ಕುಟುಂಬದ 10 ಮಂದಿ ಹತರಾಗಿದ್ಧಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ತಮ್ಮ ಗಂಡಂದಿರನ್ನು ಕಳೆದುಕೊಂಡ ನಮ್ಮ ಸಹೋದರಿಯರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ನಮ್ಮ ಭದ್ರತಾ ಪಡೆಗಳ ಭಾವನೆ ಏನೆಂಬುದು ಈ ಕಾರ್ಯಾಚರಣೆಯಿಂದ ಗೊತ್ತಾಗಿದೆ. ನಮ್ಮ ಸಹೋದರಿಯರು ಮತ್ತು ತಾಯಂದಿರ ಗಂಡಂದಿರನ್ನು ಕೊಲ್ಲಲು ಧೈರ್ಯ ಮಾಡಿದವರು ಈಗ ಕ್ಷಿಪಣಿ ದಾಳಿಯಲ್ಲಿ ತಮ್ಮ ಇಡೀ ಕುಟುಂಬವನ್ನು ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments