Webdunia - Bharat's app for daily news and videos

Install App

ಕಾಳಧನದ ವಿರುದ್ಧ ಮೋದಿ ಹೋರಾಟ; ಪ್ರತಿಪಕ್ಷಗಳಿಗೆ ಜೀರ್ಣಿಸಲಾಗುತ್ತಿಲ್ಲ ಎಂದ ನಾಯ್ಡು

Webdunia
ಶುಕ್ರವಾರ, 18 ನವೆಂಬರ್ 2016 (16:43 IST)
500 ಮತ್ತು 1000 ರೂಪಾಯಿಗಳ ನೋಟಿನ ನಿಷೇಧದಿಂದಾಗಿ ಜನರು ಎದುರಿಸುತ್ತಿರುವ ಸಮಸ್ಯೆಗಳು 10 ದಿನಗಳೊಳಗೆ ಪರಿಹರಿಸಲ್ಪಡಲಿವೆ ಎಂದಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ವಿರೋಧ ಪಕ್ಷಗಳು ವೃಥಾ ಕೋಲಾಹಲವನ್ನು ಸೃಷ್ಟಿ ಮಾಡುತ್ತಿವೆ ಎಂದು ಕಿಡಿಕಾರಿದ್ದಾರೆ. 
ಕಪ್ಪುಹಣದ ವಿರುದ್ಧ ಪ್ರಧಾನಿ ಐತಿಹಾಸಿಕ ನಡೆಯನ್ನಿಟ್ಟಿದ್ದಾರೆ. ಇದನ್ನು ಜೀರ್ಣಿಸಿಕೊಳ್ಳಲು ವಿರೋಧ ಪಕ್ಷಗಳಿಗೆ ಕಷ್ಟವಾಗುತ್ತಿದ್ದು ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ನಾಯ್ಡು ಗುಡುಗಿದ್ದಾರೆ. 
 
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸಹ ಹರಿಹಾಯ್ದ ಅವರು, ಟಿಎಂಸಿ ನಡೆಸಿದ ಪ್ರತಿಭಟನಾ ಮೆರವಣಿಗೆಗೆ ಮೋದಿ ಪರ ಘೋಷಣೆಯೊಂದಿಗೆ ಸ್ವಾಗತಿಸಲ್ಪಟ್ಟಿತು ಎಂದು ವ್ಯಂಗ್ಯವಾಡಿದ್ದಾರೆ. 
 
ಈ ನಡೆಯನ್ನು ಹಿಂಪಡೆಯುವ ಸಾಧ್ಯತೆಯನ್ನು ತಳ್ಳಿ ಹಾಕಿದ ಅವರು, ಈ ನಿರ್ಧಾರವನ್ನು ಹಿಂಪಡೆಯಲು ಮಮತಾ ಒತ್ತಾಯಿಸುತ್ತಿರುವುದು ಕೇವಲ ಅವರ ಜನಪ್ರಿಯತೆಯನ್ನು ತಗ್ಗಿಸಲಿದೆ ಎಂದು ಹೇಳಿದ್ದಾರೆ.
 
ನೋಟು ನಿಷೇಧದ ಮಾಹಿತಿ ಮೊದಲೇ ಸೋರಿಕೆಯಾಗಿತ್ತು ಎಂಬುದನ್ನು ಬದಿಗಿಟ್ಟು ಮಾತನಾಡಿದ ಅವರು ಕೇಂದ್ರದ ಈ ಕ್ರಾಂತಿಕಾರಿ ನಡೆಯನ್ನು ಐಎಮ್ಎಫ್, ವಿಶ್ವ ಬ್ಯಾಂಕ್ ಮತ್ತು ಬ್ರಿಕ್ಸ್ ಬ್ಯಾಂಕ್‌ಗಳ ಪ್ರಶಂಸೆಗೆ ಒಳಗಾಗಿದೆ ಎಂದಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments