Publish Date: Sat, 22 Feb 2020 (11:58 IST)
Updated Date: Sat, 22 Feb 2020 (12:01 IST)
ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಪಟಿಯಾಲ ಕೋರ್ಟ್ ದೋಷಿಗಳಿಗೆ ಮಾರ್ಚ್ 3 ರಂದು ಗಲ್ಲು ಶಿಕ್ಷೆ ಜಾರಿಗೊಳಿಸಿದೆ.
ಈಗ ಅಪರಾಧಿಗಳಿಗೆ ಪೋಷಕರನ್ನು ಭೇಟಿಯಾಗಲು ಅವಕಾಶ ನೀಡಲಾಗಿದೆ.ತಿಹಾರ್ ಜೈಲಾಧಿಕಾರಿಗಳು ಈ ಅವಕಾಶವನ್ನು ನೀಡಿದ್ದಾರೆ.ಗಲ್ಲು ಶಿಕ್ಷೆ ವಿಳಂಬಕ್ಕೆ ಇರುವ ಎಲ್ಲಾ ದಾರಿಗಳು ಮುಚ್ಚಿ ಹೋಗಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಲಾಗುವುದು.