Webdunia - Bharat's app for daily news and videos

Install App

ವಿಪಕ್ಷಗಳಿಂದ ಪ್ರಜಾತಂತ್ರಕ್ಕೆ ಅಪಮಾನ: ಪ್ರಧಾನಿ ಮೋದಿ ವ್ಯಗ್ರ

Webdunia
ಮಂಗಳವಾರ, 3 ಆಗಸ್ಟ್ 2021 (15:39 IST)
ನವದೆಹಲಿ(ಆ. 03): ಎರಡು ವಾರದಿಂದಲೂ ಸಂಸತ್ನ ಮುಂಗಾರು ಅಧಿವೇಶನದ ಸಮಯ ಬರೀ ವಿಪಕ್ಷಗಳ ಗದ್ದಲಗಳಲ್ಲೇ ಕಳೆದುಹೋಗಿದೆ. ಸಾಧ್ಯವಿರುವ 107 ಗಂಟೆಗಳ ಪೈಕಿ ಅಧಿವೇಶನ ನಡೆದಿರುವುದು ಕೇವಲ 18 ಗಂಟೆ ಮಾತ್ರ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ.

ವಿಪಕ್ಷಗಳ ಸದಸ್ಯರು ಅಧಿವೇಶನವನ್ನ ಸುಗಮವಾಗಿ ನಡೆಯಲು ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದ ಪ್ರಧಾನಿಗಳು, ಕೆಲ ಸದಸ್ಯರು ಬಳಸುವ ಕೆಟ್ಟ ಭಾಷೆಯು ಕೇವಲ ಸಂಸತ್ತಿಗೆ ಮಾತ್ರವಲ್ಲ ಈ ದೇಶದ ಜನತೆಗೆ ಮಾಡುವ ಅವಮಾನವಾಗಿದೆ ಎಂದು ಟೀಕಿಸಿದ್ದಾರೆ. ತಮ್ಮ ಸರ್ಕಾರಕ್ಕೆ ಜನಸೇವೆಯ ಬದ್ಧತೆ ಇರುವುದರಿಂದ ತನ್ನ ಎಲ್ಲಾ ಸಚಿವರು ಹಾಗೂ ಸಂಸದರು ಸಂಸತ್ ಅಧಿವೇಶನದಲ್ಲಿ ಉಪಸ್ಥಿತರಬೇಕೆಂದು ತಿಳಿಸಿದ್ದೇನೆ. ವಿಪಕ್ಷ ಸದಸ್ಯರೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಅಧಿವೇಶನದಲ್ಲಿ ಪಾಲ್ಗೊಂಡು ಕಲಾಪ ಸಮರ್ಪಕವಾಗಿ ನಡೆಯಲು ಸಾಧ್ಯವಾಗುವಂತೆ ಮಾಡಿ ಎಂದು ನರೇಂದ್ರ ಮೋದಿ ಒತ್ತಾಯಿಸಿದ್ದಾರೆ.
ಜುಲೈ 19ರಂದು ಈ ಬಾರಿಯ ಮುಂಗಾರು ಅಧಿವೇಶನ ಪ್ರಾರಂಭವಾಗಿದೆ. ವಿಪಕ್ಷ ಸದಸ್ಯರು ಒಂದಲ್ಲ ಒಂದು ವಿಚಾರ ಇಟ್ಟುಕೊಂಡು ಅಧಿವೇಶನದಲ್ಲಿ ಗದ್ದಲ ನಡೆಸಿ ಕಲಾಪ ಅಸಾಧ್ಯವಾಗಿಸಿದ್ದಾರೆ. ಸರ್ಕಾರದ ಮೂಲಗಳ ಪ್ರಕಾರ ಸಂಸತ್ ಕಲಾಪಕ್ಕೆ ಆಗಿರುವ ಅಡ್ಡಿಯಿಂದಾಗಿ 133 ಕೋಟಿ ನಷ್ಟ ಉಂಟಾಗಿದೆ ಎನ್ನಲಾಗುತ್ತಿದೆ.
ಬಿಜೆಪಿಯ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ನಿರ್ಮಲಾ ಸೀತರಾಮನ್ ಅವರು ದೇಶದ ಆರ್ಥಿಕತೆ ಮತ್ತೆ ಹಳಿಗೆ ಬರುತ್ತಿರುವ ವಿಚಾರವನ್ನು ಒತ್ತಿಹೇಳಿದ್ದು, ಜಿಎಸ್ಟಿ ಸಂಗ್ರಹ ದಾಖಲೆ ಮಟ್ಟದಲ್ಲಿದೆ ಎಂದೂ ತಿಳಿಸಿದ್ದಾರೆ. ಇನ್ನು, ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ವಿ ಮುರಳೀಧರನ್, ಜುಲೈ ತಿಂಗಳಲ್ಲಿ ಸಿಕ್ಕಿರುವ ಖುಷಿ ಸುದ್ದಿ ಬಗ್ಗೆ ಪ್ರಧಾನಿ ಮೋದಿ ಹಂಚಿಕೊಂಡಿದ್ದನ್ನ ತಿಳಿಸಿದ್ದಾರೆ. “1.16 ಲಕ್ಷ ಕೋಟಿಯಷ್ಟು ಜಿಎಸ್ಟಿ ಹಣ ಸಂಗ್ರಹವಾಗಿದೆ. ಟೋಕಿಯೋ ಒಲಿಂಪಿಕ್ಸ್ನಲ್ಲಿ ಪಿ ವಿ ಸಿಂಧು ಅವರು ಕಂಚು ಗೆದ್ದಿರುವುದು, ಹಾಕಿ ತಂಡ ಉತ್ತಮ ಸಾಧನೆ ಮಾಡಿದ್ದು ಎಲ್ಲವೂ ಜುಲೈನಲ್ಲೇ ಬಂದಿದೆ ಎಂದು ಪ್ರಧಾನಿ ಮೋದಿ ಹೇಳಿದರು…. ಹಾಗೆಯೇ, ಹೊಸ ಡಿಜಿಟಲ್ ಪಾವತಿ ವ್ಯವಸ್ಥೆಯಾದ ಇ-ರುಪಿ ((e-Rupi) ಬಗ್ಗೆಯೂ ಅವರು ಮಾತನಾಡಿದರು” ಎಂದು ವಿ ಮುರಳೀಧರನ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಸ್ವಾತಂತ್ರ್ಯ ದಿನ ಜೈಲಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್ ಏನ್ಮಾಡಿದ್ರು ಗೊತ್ತಾ

ಮಿಷನ್ ಸುದರ್ಶನ್ ಘೋಷಿಸಿದ ಪ್ರಧಾನಿ ಮೋದಿ: ಹೀಗಂದರೆ ಏನು ಇಲ್ಲಿದೆ ವಿವರ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದಿನ ಸುದ್ದಿ
Show comments