Webdunia - Bharat's app for daily news and videos

Install App

ಸಂಸತ್ ಚಳಿಗಾಲ ಅಧಿವೇಶನದಲ್ಲಿ ಪ್ರತಿಪಕ್ಷಗಳ ಗದ್ದಲ: ಬುಧವಾರಕ್ಕೆ ಕಲಾಪ ಮುಂದೂಡಿಕೆ

Sampriya
ಸೋಮವಾರ, 25 ನವೆಂಬರ್ 2024 (14:57 IST)
Photo Courtesy X
ನವದೆಹಲಿ: ಇಂದು ಸಂಸತ್ತಿನಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ ನಡೆಯಿತು. ಹೀಗಾಗಿ, ಲೋಕಸಭೆ ಮತ್ತು ರಾಜ್ಯಸಭೆಯ ಸದನಗಳ ಕಲಾಪವನ್ನು ನವೆಂಬರ್ 27ಕ್ಕೆ ಮುಂದೂಡಲಾಗಿದೆ.

ಅಧಿವೇಶನದ ಮೊದಲ ದಿನದಂದು ಸದನವು ಸಭೆ ಸೇರಿದ ತಕ್ಷಣ, ಮಹಾರಾಷ್ಟ್ರದ ನಾಂದೇಡ್ ಕ್ಷೇತ್ರದಿಂದ ಸದನಕ್ಕೆ ಚುನಾಯಿತರಾಗಿದ್ದ ವಸಂತರಾವ್ ಚವಾಣ್ ಮತ್ತು ಪಶ್ಚಿಮ ಬಂಗಾಳದ ಬಸಿರ್ಹತ್ ಕ್ಷೇತ್ರದಿಂದ ಚುನಾಯಿತರಾಗಿದ್ದ ಎಸ್ಕೆ ನೂರುಲ್ ಇಸ್ಲಾಂ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.

ಬಳಿಕ ವಿಪಕ್ಷಗಳು ವಕ್ಫ್ ಮಂಡಳಿ ವಿವಾದ ಹಾಗೂ ಮಣಿಪುರ ಗಲಭೆ ಕುರಿತು ಚರ್ಚೆಗೆ ಆಗ್ರಹಿಸಿದವು. ಈ ವಿಷಯದಲ್ಲಿ ವಾಗ್ವಾದ ಆರಂಭಗೊಂಡಿದ್ದರಿಂದ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪಗಳನ್ನು ನ.27ಕ್ಕೆ ಮುಂದೂಡಲಾಯಿತು.

ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ, ಬ್ಯಾಕಿಂಗ್ ಮಸೂದೆ ಮತ್ತು ರೈಲ್ವೆ ವಿಧೇಯಕ ತಿದ್ದುಪಡಿ ಮಸೂದೆ, ವಕ್ಫ್ ಮಂಡಳಿ ಮಸೂದೆ ಮತ್ತು ಪ್ರಕೃತಿ ವಿಕೋಪ ನಿರ್ವಹಣೆ ಮಸೂದೆಗಳನ್ನು ಮಂಡಿಸಲು ಮುಂದಾಗಿತ್ತು.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಗೆಲುವಿನ ಹಿನ್ನೆಲೆಯಲ್ಲಿ ತರಾತರಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಮಸೂದೆಗಳನ್ನು ಮಂಡಿಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಪ್ರತಿಪಕ್ಷಗಳು ಯಾವುದೇ ಮಸೂದೆ ಮಂಡನೆ ಮಾಡುವ ಮುನ್ನ ಮಣಿಪುರದಲ್ಲಿ ಮರುಕಳಿಸಿರುವ ಹಿಂಸಾಚಾರ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದವು. ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ಸದಸ್ಯರು ಗದ್ಧಲ ಸೃಷ್ಟಿಸಿದ್ದರಿಂದ ಸಭಾಪತಿ ಕಲಾಪವನ್ನು ಮುಂದೂಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಮನೆತನದ ತ್ಯಾಗದ ಫಲವೇ ಕೆಆರ್‌ಎಸ್ ಡ್ಯಾಂ: ಮಹಾದೇವಪ್ಪ ಹೇಳಿಕೆಗೆ ಸುಬುಧೇಂದ್ರ ತೀರ್ಥ ಪ್ರತಿಕ್ರಿಯೆ

ಜಾರ್ಖಂಡ್‌ ಮಾಜಿ ಸಿಎಂ ಸಿಬು ಸೊರೇನ್ ನಿಧನ: ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಮಾಜಿ ಸಿಎಂ ಶಿಬು ಸೊರೆನ್ ನಿಧನ: ಮೂರು ದಿನಗಳ ಶೋಕಾಚರಣೆ ಘೋಷಿಸಿದ ಜಾರ್ಖಂಡ್‌ ಸರ್ಕಾರ

ರಾಹುಲ್ ಗಾಂಧಿ ಪ್ರತಿಭಟನೆ ರದ್ದಾಗುತ್ತಿದ್ದಂತೇ ಬಿಜೆಪಿ ಪ್ರತಿಭಟನೆಯೂ ಕ್ಯಾನ್ಸಲ್

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ಜೆಟ್‌ ಮೇಲೆ ಹಲ್ಲೆ, ಘಟನೆಯ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಸ್ಪೈಸ್‌ಜೆಟ್‌ ಉದ್ಯೋಗಿ

ಮುಂದಿನ ಸುದ್ದಿ
Show comments