Webdunia - Bharat's app for daily news and videos

Install App

ಪಾಕ್, ಬಾಂಗ್ಲಾ ಹಿಂದೂ ನಿರಾಶ್ರಿತರಿಗೆ ಭಾರತದ ಪೌರತ್ವ

Webdunia
ಶುಕ್ರವಾರ, 30 ಜನವರಿ 2015 (09:29 IST)
ಪಾಕಿಸ್ತಾನದಲ್ಲಿನ ದಬ್ಬಾಳಿಕೆಯನ್ನು ತಾಳಲಾರದೆ ಭಾರತಕ್ಕೆ ಓಡಿ ಬಂದು ನೆಲೆಸಿರುವ ಹಿಂದೂಗಳಿಗೆ ಭಾರತದ ಪೌರತ್ವ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 
 
7 ವರ್ಷಕ್ಕಿಂತ ಹೆಚ್ಚು ಕಾಲದಿಂದ ಇಲ್ಲಿ ನೆಲೆಸಿರುವ ಪಾಕಿಸ್ತಾನಿ ಹಿಂದೂಗಳಿಗೆ ಮಾತ್ರ ಈ ಅವಕಾಶವನ್ನು ಕಲ್ಪಿಸಲಾಗುವುದು ಎಂದು ವರದಿಯಾಗಿದೆ. ಉತ್ತರ ಪ್ರದೇಶ್, ಗುಜರಾತ್  ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈ ಸಂಬಂಧ ಶಿಬಿರಗಳನ್ನು ಆರಂಭಿಸಲಾಗಿದ್ದು ಅರ್ಜಿ ಸ್ವೀಕರಿಸಿ ಪರಿಶೀಲಿಸಲಾಗುತ್ತಿದೆ. 
 
ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳು ಮತ್ತು ಸಿಖ್‌ರ ಮೇಲೆ ಅವ್ಯಾಹತವಾಗಿ ದೌರ್ಜನ್ಯಗಳು ನಡೆಯುತ್ತಿದ್ದು, ಅಲ್ಲಿಂದ ಪಲಾಯನ ಮಾಡಿ ಭಾರತಕ್ಕೆ ಬರುವುದು ಕೂಡ ಸಾಮಾನ್ಯ ಸಂಗತಿಯಾಗಿದೆ. ಈ ನಿರಾಶ್ರಿತರಲ್ಲಿ ಹೆಚ್ಚಿನವರು ಪ್ರವಾಸಿ ವೀಸಾ ಮತ್ತು ದೀರ್ಘಕಾಲದ ವೀಸಾ ಹೊಂದಿದ್ದಾರೆ. ಬಹುತೇಕರು ವೀಸಾ ಅವಧಿ ವಿಸ್ತರಿಸುವಂತೆ ಅಥವಾ ತಮಗೆ ಭಾರತೀಯ ಪೌರತ್ವ ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. 
 
ಬಾಂಗ್ಲಾದೇಶದಿಂದ ಓಡಿ ಬಂದಿರುವ ಹಿಂದೂಗಳಿಗೂ ಸಹ ಸೂಕ್ತ ಮಾನದಂಡಗಳಿದ್ದರೆ ಭಾರತದ ಪೌರತ್ವವನ್ನು ನೀಡಲು ನಿರ್ಧರಿಸಲಾಗಿದೆ. 
 
ದೇಶದಲ್ಲಿ ಸುಮಾರು 20,000ಕ್ಕೂ ಹೆಚ್ಚು ಪಾಕ್ ಮತ್ತು ಬಾಂಗ್ಲಾ ನಿರಾಶ್ರಿತರು ಭಾರತೀಯ ಪೌರತ್ವ ಪಡೆಯಲು ಅರ್ಹರಾಗಿದ್ದಾರೆ ಎನ್ನಲಾಗುತ್ತಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments