Webdunia - Bharat's app for daily news and videos

Install App

ಮಹಾಕುಂಭಮೇಳದಲ್ಲಿ ಏಳು ಸಾವಿರಕ್ಕೂ ಅಧಿಕ ಮಹಿಳೆಯರಿಂದ ಸನ್ಯಾಸ ದೀಕ್ಷೆ ಸ್ವೀಕಾರ

Sampriya
ಸೋಮವಾರ, 10 ಫೆಬ್ರವರಿ 2025 (15:04 IST)
Photo Courtesy X
ಉತ್ತರ ಪ್ರದೇಶ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಮೇಳದಲ್ಲಿ ಸುಮಾರು 7,000ಕ್ಕೂ ಹೆಚ್ಚು ಮಹಿಳೆಯರು ಸನ್ಯಾಸ ದೀಕ್ಷೆ ಸ್ವೀಕರಿಸಿದ್ದಾರೆ.

ಜುನಾ ಅಖಾರಾದ ಆಚಾರ್ಯ ಮಹಾಮಂಡಲೇಶ್ವರ ಸ್ವಾಮಿ ಅವಧೇಶಾನಂದ ಗಿರಿ, ಶ್ರೀ ಪಂಚದಶನಮ್ ಆವಾಹನ ಅಖಾರಾದ ಆಚಾರ್ಯ ಮಹಾಮಂಡಲೇಶ್ವರ ಸ್ವಾಮಿ ಅರುಣ್ ಗಿರಿ ಮತ್ತು ವೈಷ್ಣವ ಸಂತರ ಧರ್ಮಾಚಾರ್ಯರ ನೇತೃತ್ವದಲ್ಲಿ ಮಹಿಳೆಯರು ದೀಕ್ಷೆ ಸ್ವೀಕರಿಸಿದ್ದಾರೆ ಎಂದು ಉತ್ತರ ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.

ಎಲ್ಲಾ ಪ್ರಮುಖ ಅಖಾರಾಗಳಲ್ಲಿ 7,000ಕ್ಕೂ ಹೆಚ್ಚು ಮಹಿಳೆಯರು 'ಗುರು ದೀಕ್ಷೆ' ಪಡೆದು ಸನಾತನ ಧರ್ಮಕ್ಕೆ ಸೇವೆ ಸಲ್ಲಿಸುವುದಾಗಿ ಪ್ರತಿಜ್ಞೆ ಮಾಡಿದರು. ಈ ಪೈಕಿ ವಿದ್ಯಾವಂತ ಮಹಿಳೆಯರೇ ಹೆಚ್ಚು ಎನ್ನುವುದು ವಿಶೇಷ.

ಈ ಬಾರಿಯ ಮಹಾಕುಂಭದಲ್ಲಿ 246 ಮಹಿಳೆಯರು ನಾಗ ಸನ್ಯಾಸಿನಿಯಾಗಿ ದೀಕ್ಷೆ ಪಡೆದುಕೊಂಡಿದ್ದಾರೆ ಎಂದು ಶ್ರೀ ಪಂಚದಶನಂ ಜುನಾ ಅಖಾರಾದ ಅಧ್ಯಕ್ಷೆ ಡಾ.ದೇವಯಾ ಗಿರಿ ಹೇಳಿದ್ದಾರೆ.

2019ರ ಕುಂಭಮೇಳದಲ್ಲಿ 210 ಮಹಿಳೆಯರಿಗೆ ನಾಗ ಸನ್ಯಾಸಿನಿ ದೀಕ್ಷೆ ನೀಡಲಾಗಿತ್ತು ಎಂದು ದೇವಯಾ ತಿಳಿಸಿದ್ದಾರೆ. ಈ ಬಾರಿಯ ಮಹಾಕುಂಭಮೇಳಕ್ಕೆ ಬರುವ 10 ಮಂದಿಯ ಪೈಕಿ ನಾಲ್ವರು ಮಹಿಳೆಯಾಗಿದ್ದಾರೆ ಎಂದು ವರದಿಯಾಗಿದೆ.

 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಯವರು ಹವಾಮಾನ ವರದಿ ತಪ್ಪದೇ ಗಮನಿಸಿ

ಕೇಂದ್ರ ಜಾತಿಗಣತಿ ಮಾಡುವಾಗಲೂ ಬಿಜೆಪಿ ನಾಯಕರಿಗೆ ವಿರೋಧಿಸುವ ಧಮ್ ಇದ್ಯಾ: ಸಿದ್ದರಾಮಯ್ಯ

ಪಾಕಿಸ್ತಾನ ವಿರುದ್ಧ ಕ್ರಿಕೆಟ್ ಗೆದ್ದರೆ ಯುದ್ಧ ಗೆದ್ದಂತಾ: ಬಿಕೆ ಹರಿಪ್ರಸಾದ್ ವ್ಯಂಗ್ಯ

ಕರ್ನಾಟಕ ಜಾತಿ ಸಮೀಕ್ಷೆ ವಿರೋಧಿಸುತ್ತಿರುವ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಫುಲ್ ಗರಂ

ಬೆಂಗಳೂರಿನಲ್ಲಿ ಯಾವಾಗ ಜಾತಿಗಣತಿ ಆರಂಭ: ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments