Webdunia - Bharat's app for daily news and videos

Install App

ಸಿಬಿಐ ದಾಳಿಯ ಬಗ್ಗೆ ಪ್ರತಿಕ್ರಿಯೆಗೆ ಪಿ.ಚಿದಂಬರಂ ನಕಾರ

Webdunia
ಮಂಗಳವಾರ, 16 ಮೇ 2017 (14:28 IST)
ಪುತ್ರನ ಮನೆ ಹಾಗೂ ಕಂಪೆನಿಗಳ ಮೇಲೆ ನಡೆದ ಸಿಬಿಐ ದಾಳಿಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಾಜಿ ಸಚಿವ ಪಿ.ಚಿದಂಬರಂ ಹೇಳಿದ್ದಾರೆ.
 
ಹೈಕೋರ್ಟ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕೀಲನಾಗಿ ಹೈಕೋರ್ಟ್‌ನಲ್ಲಿ ವಾದ ಮಂಡಿಸಲು ಬಂದಿದ್ದೇನೆಯೇ ಹೊರತು ಸಿಬಿಐ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಲು ಅಲ್ಲ ಎಂದು ತಿಳಿಸಿದ್ದಾರೆ.
 
ಪುತ್ರ ಕಾರ್ತಿಕ್‌ಗೆ ಸಂಬಂದಿಸಿದ 11 ಸ್ಥಳಗಳ ಮೇಲೆ ದಾಳಿ ಮಾಡಿದ ಸಿಬಿಐ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಅವ್ಯವಹಾರವಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ ಕೆಲವೇ ದಿನಗಳಲ್ಲಿ ಸಿಬಿಐ ದಾಳಿ ನಡೆದಿರುವುದು ರಾಜಕೀಯ ಪ್ರೇರಿತವಾಗಿದೆ. ವಿದೇಶಿ ಬಂಡವಾಳ ಹೂಡಿಕೆ ಕುರಿತಂತೆ ತನಿಖೆ ನಡೆಸಲು ಸಿಬಿಐಗೆ ಯಾವುದೇ ಅಧಿಕಾರವಿಲ್ಲ. ಅಧಿಕಾರಿಗಳನ್ನು ಮಾತ್ರ ಪ್ರಶ್ನಿಸಬಹುದು ಎಂದು ಪಿ.ಚಿದಂಬರಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments