ಯುಪಿಎ ಸರ್ಕಾರ ಮುಂಬೈ ದಾಳಿ ಬಳಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಬೇಕೆಂದಿತ್ತು, ಅಮೆರಿಕಾ ಬೇಡ ಎಂದಿತು: ಪಿ ಚಿದಂಬರಂ

Krishnaveni K
ಮಂಗಳವಾರ, 30 ಸೆಪ್ಟಂಬರ್ 2025 (12:50 IST)
ನವದೆಹಲಿ: 26/11 ರ ಮುಂಬೈ ದಾಳಿ ಬಳಿಕ ನಾವು ಪಾಕಿಸ್ತಾನದ ಮೇಲೆ ದಾಳಿ ಮಾಡಬೇಕೆಂದಿದ್ದೆವು. ಆದರೆ ಅಮೆರಿಕಾ ಬೇಡ ಎಂದಿತು ಎಂದು ಯುಪಿಎ ಅವಧಿಯಲ್ಲಿ ಗೃಹಸಚಿವರಾಗಿದ್ದ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇಂದು ಆಪರೇಷನ್ ಸಿಂಧೂರ್ ಬಳಿಕ ಅಮೆರಿಕಾ ಮಾತು ಕೇಳಿ ಮೋದಿ ಸರ್ಕಾರ ಪಾಕಿಸ್ತಾನದ ವಿರುದ್ಧ ಯುದ್ಧ ನಿಲ್ಲಿಸಿತು ಎಂದು ರಾಹುಲ್ ಗಾಂಧಿ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರವನ್ನು ಟೀಕಿಸುತ್ತಿದ್ದಾರೆ. ಮೋದಿ ಸರ್ಕಾರ ಡೊನಾಲ್ಡ್ ಟ್ರಂಪ್ ರ ಕೈಗೊಂಬೆ ಎಂದೆಲ್ಲಾ ರಾಹುಲ್ ಟೀಕೆ ನಡೆಸಿದ್ದರು.

ಆದರೆ ಯುಪಿಎ ಅವಧಿಯಲ್ಲಿ ಅಮೆರಿಕಾ ಯುದ್ಧ ಬೇಡ ಎಂದಿದ್ದಕ್ಕೆ ಅಂದಿನ ಮನಮೋಹನ್ ಸಿಂಗ್ ಸರ್ಕಾರ ಕನಷ್ಠ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುವುದನ್ನೂ ಮಾಡಿಲ್ಲ ಎಂದು ಬಿಜೆಪಿ ಈಗ ಭಾರೀ ಟೀಕೆ ನಡೆಸಿದೆ.

ಸಂದರ್ಶನವೊಂದರಲ್ಲಿ ಮಾತನಾಡಿದ್ದ ಪಿ ಚಿದಂಬರಂ ಹೀಗೊಂದು ಹೇಳಿಕೆ ನೀಡಿದ್ದಾರೆ. ನಾವೂ ಅಂದು ಪಾಕಿಸ್ತಾನದ ಮೇಲೆ ದಾಳಿ ಮಾಡೋಣ ಎಂದುಕೊಂಡಿದ್ದೆವು. ಆದರೆ ವಿದೇಶಾಂಗ ಇಲಾಖೆ ಅದಕ್ಕೆ ತಯಾರಿರಲಿಲ್ಲ. ಅಮೆರಿಕಾ ಯುದ್ಧ  ಬೇಡ ಎಂದಿತ್ತು. ಹೀಗಾಗಿ ಸುಮ್ಮನಾದೆವು ಎಂದು ಪಿ ಚಿದಂಬರಂ ಹೇಳಿದ್ದಾರೆ. ಅವರ ಹೇಳಿಕೆ ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಮುಂದಿನ ಸುದ್ದಿ
Show comments