Webdunia - Bharat's app for daily news and videos

Install App

ಪಬ್​ಜಿ ಪ್ರಿಯರೇ ಎಚ್ಚರ...!

Webdunia
ಸೋಮವಾರ, 22 ನವೆಂಬರ್ 2021 (10:13 IST)
ಇಡೀ ಗೇಮಿಂಗ್ ಲೋಕದಲ್ಲೇ ಪಬ್ಜಿ ಕ್ರಿಯೆಟ್ ಮಾಡಿರೋ ಕ್ರೇಜ್ ಯಾವ ಗೇಮ್ ಮಾಡಿಲ್ಲ. ಮಾಡೋದು ಇಲ್ಲ.
ಯಾರನ್ನು ಕೇಳಿದರು ಪಬ್ಜಿ ಅಂತಾರೆ. ಅಷ್ಟರ ಮಟ್ಟಿಗೆ ಈ ಗೇಮ್ ಎಲ್ಲರನ್ನು ಆವರಿಸಿಕೊಂಡುಬಿಟ್ಟಿದೆ. ಕೆಲ ತಿಂಗಳು ಈ ಪಬ್ಜಿ ಗೇಮ್ ಇಂಡಿಯಾದಲ್ಲಿ ಬ್ಯಾನ್ ಮಾಡಲಾಗಿತ್ತು. ಆದರೆ, ಬ್ಯಾನ್ ತೆಗೆದ ಮೇಲೆ ಮತ್ತೆ ಯುವಜನತೆ ಈ ಪಬ್ಜಿ ಗೇಮ್ನಲ್ಲಿ ಮುಳುಗಿಹೋಗಿದೆ. ಈ ಹಿಂದೆಯೂ ಪಬ್ಜಿ ಗೇಮ್ನಿಂದ ಆದ ಅನಾಹುತ ಒಂದೆರೆಡಲ್ಲ. ಪಬ್ಜಿ ಆಟವಾಡಲು ಮೊಬೈಲ್ ಕೊಡಲಿಲ್ಲ ಅಂತ ತಂದೆಯನ್ನೇ ಕೊಂದ ಕಥೆಯನ್ನು ಕೇಳಿದ್ದೇವೆ. ಪಬ್ಜಿ ಆಡಿ ಹುಚ್ಚಾರಾಗಿ ಆಸ್ಪತ್ರೆ ಸೇರಿರುವುದನ್ನು ನೋಡಿದ್ದೇವೆ. ಈ ಪಬ್ಜಿ ಆಟದೊಳಗೆ ಮುಳುಗಿದರೆ, ಹೊರಗಿನ ಪ್ರಪಂಚದ ಅರಿವೆ ಇರುವುದಿಲ್ಲ. 100 ಜನರಲ್ಲಿ ಕೊನೆಯದಾಗಿ ಉಳಿದು ವಿನ್ನರ್.. ವಿನ್ನರ್..ಚಿಕನ್ ಡಿನ್ನರ್ ಮಾಡುವವರೆಗೂ ಗೇಮ್ನಿಂದ ಆಚೆ ಬರುವುದಿಲ್ಲ. ಇದೀಗ ಪಬ್ಜಿ ಗೇಮ್ನಿಂದ ಮತ್ತೊಂದು ದುರತವೊಂದು ನಡೆದುಹೋಗಿದೆ.  ಹೀಗೆ ಪಬ್ಜಿ ಆಡುತ್ತಾ ವಾಕಿಂಗ್ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ರೈಲು ಹರಿದ ಘಟನೆ ಉತ್ತರ ಪ್ರದೇಶ ಮಥುರಾದಲ್ಲಿ ನಡೆದಿದೆ.
10ನೇ ತರಗತಿ ವಿದ್ಯಾರ್ಥಿಗಳಾದ 18 ವರ್ಷದ ಕಪಿಲ್ ಹಾಗೂ 16 ವರ್ಷ ರಾಹುಲ್ ಇಬ್ಬರು ವಾಕಿಂಗ್ ಮಾಡುತ್ತಿದ್ದ ವೇಳೆ ಪಬ್ಜಿ ಆಟದಲ್ಲಿ ಮುಳುಗಿದ್ದಾರೆ. ವಾಕಿಂಗ್ ದಾರಿ ತಪ್ಪಿದೆ. ಗಮನ ಪಬ್ಜಿ ಮೇಲೆ ಹೆಚ್ಚಾಗಿತ್ತು. ಪರಿಣಾಮ ಇಬ್ಬರು ವಿದ್ಯಾರ್ಥಿಗಳ ಮೇಲೆ ರೈಲು ಹರಿದು ಸ್ಥಳದಲ್ಲೇ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ನಿನ್ನೆ ಭಾನುವಾರ ಶಾಲೆಗೆ ರಜೆ  ಇದ್ದ ಕಾರಣ ಬೆಳಗ್ಗೆಯಿಂದಲೇ ಆಟ ಆಡಲು ಶುರು ಮಾಡಿಕೊಂಡಿದ್ದರೆ.  ವಾಕಿಂಗ್ ವೇಳೆ ಪಬ್ಜಿ ಗೇಮ್ ಆಡುತ್ತಾ ಮುಂದೆ ಸಾಗಿದ್ದಾರೆ. ಈ ಇಬ್ಬರು ವಿದ್ಯಾರ್ಥಿಗಳು ದಿನವಿಡಿ ಪಬ್ಜಿ ಆಡುತ್ತಿರಲಿಲ್ಲ. ಓದುವುದರಲ್ಲೂ ಮುಂದಿದ್ದರು. ಬಿಡುವು ಸಿಕ್ಕಾಗ ಮಾತ್ರ ಪಬ್ಜಿ ಆಡುತ್ತಿದ್ದರಂತೆ. ಆದರೆ  ವಿಧಿಯಾಟವೇ ಬೇರೆಯಾಗಿತ್ತು. ಇಬ್ಬರ ಪ್ರಾಣಪಕ್ಷಿ ಹಾರಿಹೋಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

Bengaluru: ಇಬ್ಬರು ಮಕ್ಕಳಿದ್ದರು ಮತ್ತೇ ಪ್ರೀತಿಯಲ್ಲಿ ಬಿದ್ದ ಮಹಿಳೆ, ಬದುಕು ದುರಂತ ಅಂತ್ಯ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಮುಂದಿನ ಸುದ್ದಿ
Show comments