Select Your Language

Notifications

webdunia
webdunia
webdunia
webdunia

ಪ್ರೀತಿ ನಿರಾಕರಿಸಿದ ಶಿಕ್ಷಕಿಯನ್ನೇ ಕೊಂದ ಪಾಗಲ್ ಪ್ರೇಮಿ

ಪ್ರೀತಿ ನಿರಾಕರಿಸಿದ ಶಿಕ್ಷಕಿಯನ್ನೇ ಕೊಂದ ಪಾಗಲ್ ಪ್ರೇಮಿ
ಚೆನ್ನೈ , ಭಾನುವಾರ, 24 ಫೆಬ್ರವರಿ 2019 (12:19 IST)
ಚೆನ್ನೈ : ಪ್ರೀತಿ ನಿರಾಕರಿಸಿದ ಶಿಕ್ಷಕಿಯನ್ನು ಪ್ರಿಯಕರನೇ ಶಾಲೆಯ ಆವರಣದ  ಮುಂದೆಯೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ.


ಎಸ್.ರಮ್ಯಾ(23) ಕೊಲೆಯಾದ ಶಿಕ್ಷಕಿ. ಈಕೆ ಕಡಲೂರಿನ ಪೆರಿಯಾರ್ ಆರ್ಟ್ಸ್ ಕಾಲೇಜಿನಿಂದ ಪದವಿ ಪಡೆದ ನಂತರ ಕುರಿಂಜಿಪಾಡಿನಲ್ಲಿರುವ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈಕೆಗೆ ಊಮಂಗಲಂ ನಿವಾಸಿ ರಾಜಶೇಖರ್ ಎಂಬಾತ ಪ್ರೀತಿಸುವಂತೆ ಒತ್ತಾಯಿಸಿ ಹಿಂಬಾಲಿಸುತ್ತಿದ್ದನು. ಇದಕ್ಕೆ ಆಕೆ ನಿರಾಕರಿಸಿದ್ದಕ್ಕೆ ಕೋಪಗೊಂಡ ಆತ, ರಮ್ಯಾ ಶಾಲೆಯ ಆವರಣದ ಮುಂದೆ ನಿಂತಿದ್ದ ವೇಳೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.


ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಅನ್ಯಾಯ ಮಾಡಲು ಹೊರಟ ಸಚಿವ ರೇವಣ್ಣಗೆ ಕೆ.ಆರ್.ಪೇಟೆ ರೈತರಿಂದ ಖಡಕ್ ಎಚ್ಚರಿಕೆ