Webdunia - Bharat's app for daily news and videos

Install App

Pahalgam Terror Attack: ಇನ್ಮುಂದೆ ಪಾಕ್‌ನ ಯೂಟ್ಯೂಬ್‌ ಚಾನೆಲ್‌ಗಳು ಭಾರತದಲ್ಲಿ ಓಪನ್ ಆಗಲ್ಲ, ಕ್ರಿಕೆಟಿಗನಿಗೂ ತಟ್ಟಿದ ಬಿಸಿ

Sampriya
ಸೋಮವಾರ, 28 ಏಪ್ರಿಲ್ 2025 (16:55 IST)
Photo Credit X
ಬೆಂಗಳೂರು: ಭಾರತದ ಬಗ್ಗೆ "ಸುಳ್ಳು, ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು" ಪ್ರಸಾರ ಮಾಡುತ್ತಿದೆ ಎಂದು ಆರೋಪಿಸಿ ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್‌ಗಳನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದರ ಬಿಸಿ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಮೇಲೂ ಪರಿಣಾಮ ಬೀರಿದೆ.   

ಶೋಯೆಬ್ ಅಖ್ತರ್ ಅವರ ಯೂಟ್ಯೂಬ್ ಚಾನೆಲ್ ಅನ್ನು ಸರ್ಕಾರ ನೀಡಿದ ಪಟ್ಟಿಯಲ್ಲಿ ಸೇರಿಸಲಾಗಿಲ್ಲ. ಆದರೆ ರಾಷ್ಟ್ರೀಯ ಭದ್ರತೆ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ಸರ್ಕಾರದ ಆದೇಶದಿಂದಾಗಿ ಈ ವಿಷಯವು ಪ್ರಸ್ತುತ ಈ ದೇಶದಲ್ಲಿ ಲಭ್ಯವಿಲ್ಲ ಎಂದು ಸಂದೇಶವು ಹೇಳುತ್ತದೆ.

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ಮುಗ್ದ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ಬಳಿಕ ಭಾರತ ವಾಘಾ ಹಾಗೂ ಅಟ್ಟಾರಿ ಬಾರ್ಡರ್‌ ಅನ್ನು ಬಂದ್ ಮಾಡುವ ಮೂಲಕ ಪ್ರತ್ಯುತ್ತರವನ್ನು ನೀಡಲು ಶುರು ಮಾಡಿದೆ.  

ಇದೀಗ ಗೃಹ ಸಚಿವಾಲಯದ ಶಿಫಾರಸಿನ ಮೇರೆಗೆ, ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ದುರಂತ ಪಹಲ್ಗಾಮ್ ಭಯೋತ್ಪಾದಕ ಘಟನೆಯ ಹಿನ್ನೆಲೆಯಲ್ಲಿ ಭಾರತ, ಅದರ ಸೇನೆ ಮತ್ತು ಭದ್ರತಾ ಏಜೆನ್ಸಿಗಳ ವಿರುದ್ಧ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯ, ಸುಳ್ಳು ಮತ್ತು ದಾರಿತಪ್ಪಿಸುವ ನಿರೂಪಣೆಗಳು ಮತ್ತು ತಪ್ಪು ಮಾಹಿತಿಗಳನ್ನು ಪ್ರಸಾರ ಮಾಡುವ ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ಭಾರತ ಸರ್ಕಾರ ನಿಷೇಧಿಸಿದೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India's Got Latent row: ಯೂಟ್ಯೂಬರ್‌ ರಣವೀರ್‌ ಅಲ್ಲಾಬಾಡಿಯಾಗೆ ಸುಪ್ರೀಂಕೋರ್ಟ್‌ನಿಂದ ಸಿಕ್ತು ಬಿಗ್‌ ರಿಲೀಫ್‌

Pahalgam Terror Attack; ಭಾರತದ ಪ್ರತೀದಾಳಿಗೆ ಹೆದರಿ 500ಕ್ಕೂ ಅಧಿಕ ಪಾಕ್ ಸೈನಿಕರು ರಾಜೀನಾಮೆ

Railway Exam: ಮಂಗಳಸೂತ್ರ, ಜನಿವಾರ ನಿಷೇಧಕ್ಕೆ ಡಿಸಿಎಂ ಶಿವಕುಮಾರ್ ಆಕ್ರೋಶ

Tejasvi Surya: ಮಂಜುನಾಥ್ ಮಗ ಮತ್ತು ಭರತ್ ಭೂಷಣ್ ಮಕ್ಕಳ ಸಂಪೂರ್ಣ ಜವಾಬ್ಧಾರಿ ತೆಗೆದುಕೊಂಡ ತೇಜಸ್ವಿ ಸೂರ್ಯ

India Pakistan: ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ತಾಕತ್ತು ಭಾರತಕ್ಕಿಲ್ಲ, ಅದಕ್ಕೆ ನಾವು ಬಿಡುವುದೂ ಇಲ್ಲ: ಉಗ್ರ ಗುರುಪತ್ವಂತ್ ಸಿಂಗ್ ಪನ್ನು

ಮುಂದಿನ ಸುದ್ದಿ
Show comments