Webdunia - Bharat's app for daily news and videos

Install App

Pahalgram: ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಜುನಾಥ್‌, ಭರತ್ ಭೂಷಣ್‌ಗೆ ಅಂತ್ಯಕ್ರಿಯೆ

Sampriya
ಗುರುವಾರ, 24 ಏಪ್ರಿಲ್ 2025 (18:31 IST)
Photo Credit X
ಬೆಂಗಳೂರು: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಸಾವನ್ನಪ್ಪಿದ ಕರ್ನಾಟಕದ ಮಂಜುನಾಥ್ ರಾವ್ ಹಾಗೂ ಭರತ್ ಭೂಷಣ್‌ಗೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು.

ಇಂದು ಬೆಳಿಗ್ಗೆ ಕಾಶ್ಮೀರದಿಂದ ಕರ್ನಾಟಕಕ್ಕೆ ಮೃತದೇಹವನ್ನು ವಿಶೇಷ ವಿಮಾನದ ಮೂಲಕ ಕರೆತರಲಾಯಿತು.

ಮೃತ ಮಂಜುನಾಥ್ ರಾವ್ ಅವರ ಪಾರ್ಥಿವ ಶರೀರ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ತಲುಪಿದರೆ, ಮತ್ತೋರ್ವ ಸಂತ್ರಸ್ತ ಭರತ್ ಭೂಷಣ್ ಪಾರ್ಥಿವ ಶರೀರ ಬೆಂಗಳೂರಿನಲ್ಲಿರುವ ಅವರ ಸ್ವಗೃಹ ತಲುಪಿತು.


ಬಳಿಕ ಭರತ್ ಭೂಷಣ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಇನ್ನಿತರ ಗಣ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದರು.

ಮೃತ ಮಂಜುನಾಥ್ ಅಂತ್ಯಕ್ರಿಯೆ ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ಸರ್ಕಾರಿ ಗೌರವಗಳೊಂದಿಗೆ ನಡೆದರೆ, ಭರತ್ ಭೂಷಣ್ ಅಂತ್ಯಕ್ರಿಯೆ ಹೆಬ್ಬಾಳದ ಚಿತಾಗಾರದಲ್ಲಿ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

Air India Flight Crash: ಅಪಘಾತದ ನಂತರದ ಸ್ಫೋಟ, ಬೆಂಕಿಯ ತೀವ್ರತೆಗೆ ಇದೇ ಕಾರಣ

Air India Flight Crash: ವಿಮಾನದಲ್ಲಿದ್ರು ಗುಜರಾತ್‌ನ ಮಾಜಿ ಸಿಎಂ, ಇಲ್ಲಿದೆ ಪುರಾವೆ

ಮುಂದಿನ ಸುದ್ದಿ
Show comments