Webdunia - Bharat's app for daily news and videos

Install App

ಪಾಕ್ ಉಗ್ರ ರಾಷ್ಟ್ರ: ಭಾರತ

Webdunia
ಗುರುವಾರ, 22 ಸೆಪ್ಟಂಬರ್ 2016 (17:11 IST)
ಪಾಕಿಸ್ತಾನ 'ಭಯೋತ್ಪಾದಕ ರಾಷ್ಟ್ರ', ನಮ್ಮ ವಿರುದ್ಧ ಭಯೋತ್ಪಾದನೆ ನಡೆಸುವುದನ್ನು ಸುದೀರ್ಘ ಕಾಲದ ನೀತಿಯನ್ನಾಗಿಸಿಕೊಂಡಿದೆ,  ಎಂದು ವಿಶ್ವಸಂಸ್ಥೆಯಲ್ಲಿ ಭಾರತ ಆರೋಪಿಸಿದೆ. 
ವಿಶ್ವಸಂಸ್ಥೆಯ 71 ನೇ ಸಾಮಾನ್ಯ ಸಭೆಯಲ್ಲಿ ಮಾತನ್ನಾಡುತ್ತಿದ್ದ ವಿಶ್ವಸಂಸ್ಥೆಯ ಭಾರತದ ಖಾಯಂ ಕಾರ್ಯದರ್ಶಿ ಏನಮ್ ಗಂಭೀರ್, ಪಾಕ್ ಬೆಂಬಲದೊಂದಿಗೆ ಉಗ್ರರು ತನ್ನ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಅವರು ಪಾಕಿಸ್ತಾನದ ಬೀದಿಗಳಲ್ಲಿ ಮುಕ್ತವಾಗಿ ಓಡಾಡುತ್ತಾರೆ. ನಮ್ಮ ದೇಶದ ವಿರುದ್ಧ ಅಪರಾಧ ಚಟುವಟಿಕೆಗಳನ್ನು ನಡೆಸುವುದನ್ನೇ ಪಾಕ್ ತನ್ನ ರಾಷ್ಟ್ರೀಯ ನೀತಿಯನ್ನಾಗಿಸಿಕೊಂಡಿದೆ ಎಂದು ಕಿಡಿಕಾರಿದ್ದಾರೆ.
 
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ದೌರ್ಜನ್ಯ ನಡೆಸುತ್ತಿದೆ ಎಂಬ ಪಾಕ್ ಪ್ರಧಾನಿಯ ಆರೋಪಕ್ಕೆ ತಿರುಗೇಟು ನೀಡಿರುವ ಅವರು, ಮಾನವ ಹಕ್ಕುಗಳ ಅತ್ಯಂತ ಹೇಯ ಉಲ್ಲಂಘನೆ ಎಂದರೆ ಭಯೋತ್ಪಾದನೆ ಎಂದಿದ್ದಾರೆ. 
 
ಈ ನೀತಿಯಿಂದಾಗಿ ಭಾರತ ಸೇರಿದಂತೆ ಇತರೇ ರಾಷ್ಟ್ರಗಳು ಕಷ್ಟಕ್ಕೆ ಈಡಾಗಿವೆ. ಈಗ ಈ ಪರಿಸ್ಥಿತಿ ಕೈ ಮೀರಿದ್ದು ಭಯೋತ್ಪಾದನೆ ಸರ್ವವ್ಯಾಪಿಯಾಗಿ ಬಿಟ್ಟಿದೆ ಎಂದು ವಿಶ್ವಸಂಸ್ಥೆಗೆ ಮೊದಲ ಖಾಯಂ ಕಾರ್ಯದರ್ಶಿಯಾಗಿರುವ ಏನಮ್ ಉಗ್ರರಿಗೆ ತರಬೇತಿ, ಆರ್ಥಿಕ ಸಹಾಯ ಮತ್ತು ನೆರೆರಾಷ್ಟ್ರಗಳ ವಿಧ್ವಂಸಕ ಕೃತ್ಯ ನಡೆಸಲು ಪಾಕ್ ಅಂತರಾಷ್ಟ್ರೀಯ ನಿಧಿಯನ್ನೇ ವಿನಿಯೋಗಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ಬೆಲೆ ಇಂದು ಇನ್ನೂ ಎತ್ತರ ಇನ್ನೂ ಹತ್ತಿರ

Jammu Kashmir cloud burst: ಮೇಘಸ್ಪೋಟಕ್ಕೆ ಹರಿದು ಬಂತು ಕಟ್ಟಡಗಳು, ವಾಹನಗಳು: ವಿಡಿಯೋ

DGP Om Prakash Rao ಹತ್ಯೆಯಾಗಿದ್ದು ಹೇಗೆ, ಪತ್ನಿ ಪಲ್ಲವಿ ಹೇಳಿದ್ದು ಕೇಳಿದರೆ ಬೆಚ್ಚಿ ಬೀಳ್ತೀರಿ

DK Shivakumar: ಡಿಕೆ ಶಿವಕುಮಾರ್ ಟೆಂಪಲ್ ರನ್ ಹಿಂದಿದೆ ಭಾರೀ ಲೆಕ್ಕಾಚಾರ: ಬಿಜೆಪಿಗೆ ಗಡ ಗಡ

Karnataka Weather: ರಾಜ್ಯದಲ್ಲಿ ಈ ವಾರ ಮಳೆಯಿರಲಿದೆಯೇ ಇಲ್ಲಿದೆ ಸಂಪೂರ್ಣ ಹವಾಮಾನ ವರದಿ

ಮುಂದಿನ ಸುದ್ದಿ
Show comments