Webdunia - Bharat's app for daily news and videos

Install App

ಪಾಕಿಸ್ತಾನದಲ್ಲಿ ಉಗ್ರರ ರಕ್ತದೋಕುಳಿ: ಕನಿಷ್ಠ 60 ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

Webdunia
ಮಂಗಳವಾರ, 25 ಅಕ್ಟೋಬರ್ 2016 (12:15 IST)
ಪಾಕಿಸ್ತಾನದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆಸಿದ್ದು ಪೊಲೀಸ್ ತರಬೇತಿ ಶಿಬಿರದ ಮೇಲೆ ದಾಳಿ ನಡೆಸಿ ಕನಿಷ್ಠ 60 ಜನರನ್ನು ಬಲಿ ಪಡೆದಿದ್ದಾರೆ. ಕ್ವೆಟ್ಟಾ ನಗರದಲ್ಲಿ ಸೋಮವಾರ ರಾತ್ರಿ 110.30ರ ಸುಮಾರಿಗೆ ಈ ಅಮಾನುಷ ಕೃತ್ಯ ನಡೆದಿದೆ. 

ಮೃತಪಟ್ಟವರಲ್ಲಿ ಬಹುತೇಕ ಮಂದಿ ಪೊಲೀಸ್ ಪೇದೆಗಳಾಗಿದ್ದು, ಘಟನೆಯಲ್ಲಿ 100ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. 
 
ಮತ್ತೆ ಹಲವು ಪೇದೆಗಳು ಉಗ್ರರ ಸೆರೆಯಾಳುಗಳಾಗಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ. 
 
ಸುಮಾರು 6 ಜನರಿದ್ದ ಭಯೋತ್ಪಾದಕ ತಂಡ ಏಕಾಏಕಿ ತರಬೇತಿ ಶಾಲೆಯನ್ನು ನುಗ್ಗಿ ಗುಂಡಿನ ಸುರಿಮಳೆಗೈದಿದೆ. ಉಗ್ರರನ್ನು ಹತ್ತಿಕ್ಕಲು ಸೇನಾ ಕಾರ್ಯಾಚರಣೆ ಆರಂಭವಾಗಿದ್ದು ಇಲ್ಲಿಯವರೆಗೆ ಮೂವರು ಉಗ್ರರು ನೆಲಕ್ಕುರುಳಿದ್ದಾರೆ. 
 
ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನ ತನ್ನ ನೀಚ ಬುದ್ಧಿಯನ್ನು ಬಿಡಲಿಲ್ಲವೆಂದರೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಅಮೆರಿಕಾ ಎಚ್ಚರಿಕೆ ನೀಡಿದ ಬೆನ್ನಲ್ಲೇ ಪಾಕ್, ಜೈಷೆ ಮೊಹಮ್ಮದ ಸಮಘಟನೆಯ ಮುಖ್ಯಸ್ಥ ಮಸೂದ್ ಅಜರ್, ಅಲ್-ಖೈದಾ ನಾಯಕ ಮತೀರ್ ರೆಹಮಾನ್ ಸೇರಿದಂತೆ ಒಟ್ಟು 5,100 ಶಂಕಿತ ಉಗ್ರರ ಖಾತೆಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಇದಕ್ಕೆ ಪ್ರತೀಕಾರವಾಗಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ನಿವೃತ್ತಿ ಬಳಿಕ ಅಮಿತ್ ಶಾ ಏನು ಮಾಡ್ತಾರೆ: ಪ್ಲ್ಯಾನ್ ರಿವೀಲ್

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments