ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕರ ದಾಳಿ!

Webdunia
ಗುರುವಾರ, 7 ಏಪ್ರಿಲ್ 2022 (06:42 IST)
ಶ್ರೀನಗರ : ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ಹೆಚ್ಚಾಗಲು ಸ್ಥಳೀಯ ಉಗ್ರರು, ಪಾಕಿಸ್ತಾನಿ ಉಗ್ರರಿಗೆ ನೀಡುತ್ತಿರುವ ಸಹಕಾರವೇ ಪ್ರಮುಖ ಕಾರಣವಾಗಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಥಳೀಯ ಭಯೋತ್ಪಾದಕರ ಎನ್ಕೌಂಟರ್ಗಳ ಸಂಖ್ಯೆಯಲ್ಲಿನ ಹೆಚ್ಚಳದ ಹಿಂದಿನ ಕಾರಣವನ್ನು ವಿವರಿಸಿದ ಕಾಶ್ಮೀರ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ವಿಜಯ್ ಕುಮಾರ್, ಪಾಕಿಸ್ತಾನಿ ಭಯೋತ್ಪಾದಕರು ದಾಳಿ ನಡೆಸಿ ತಪ್ಪಿಸಿಕೊಳ್ಳಲು ಕಾಶ್ಮೀರದ ಸ್ಥಳೀಯ ಭಯೋತ್ಪಾದಕರನ್ನು ಬಳಸುತ್ತಾರೆ ಎಂದು ಹೇಳಿದ್ದಾರೆ. 

ಇತ್ತೀಚಿನ ಎನ್ಕೌಂಟರ್ಗಳಲ್ಲಿ ಸ್ಥಳೀಯ ಭಯೋತ್ಪಾದಕರು ಹತ್ಯೆಯಾಗಿದ್ದಾರೆ. ಪಾಕಿಸ್ತಾನಿ ಭಯೋತ್ಪಾದಕರು ಪರಾರಿಯಾಗಿದ್ದಾರೆ. ಸ್ಥಳೀಯ ಭಯೋತ್ಪಾದಕರನ್ನು ಮುಂದಿಟ್ಟುಕೊಂಡು ಪಾಕಿಸ್ತಾನಿ ಭಯೋತ್ಪಾದಕರು ಹಿಂದಿನಿಂದ ದಾಳಿ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇಂದು ನಡೆದ ಟ್ರಾಲ್ ಎನ್ಕೌಂಟರ್ ಕುರಿತು ಮಾತನಾಡಿದ ಐಜಿಪಿ ಕುಮಾರ್, ಉಮರ್ ತೇಲಿ ಮತ್ತು ಸಫತ್ ಇಬ್ಬರೂ ಸ್ಥಳೀಯ ಭಯೋತ್ಪಾದಕರು. ಶ್ರೀನಗರದಲ್ಲಿ ಉಗ್ರ ಕಾರ್ಯಾಚರಣೆ ನಡೆಸುತ್ತಿದ್ದರು ಎಂದು ವಿವರಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೌರಾಯುಕ್ತೆಗೆ ಧಮ್ಕಿ ಪ್ರಕರಣ, ಕೊನೆಗೂ ಕೈ ನಾಯಕ ರಾಜೀವ್ ಗೌಡ ಲಾಕ್‌

ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರು: ಅವರನ್ನು ಓಡಿಸಲು ಎಸ್‌ಐಆರ್ ಜಾರಿಗೊಳಿಸಲು ಯತ್ನಾಳ್ ಒತ್ತಾಯ

ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments