Webdunia - Bharat's app for daily news and videos

Install App

ಇತ್ತ ಸೆರೆಮನೆ ಸೇರಿದ ಶಶಿಕಲಾ, ಅತ್ತ ಸಿಎಂ ಗದ್ದುಗೆಗಾಗಿ ಗದ್ದಲ

Webdunia
ಗುರುವಾರ, 16 ಫೆಬ್ರವರಿ 2017 (08:42 IST)
ತಮಿಳುಮಾಡಿನ ರಾಜಕೀಯ ದಿನದಿನಕ್ಕೂ ಕುತೂಹಲವನ್ನು ಕೆರಳಿಸುತ್ತಿದೆ. ಜಯಲಲಿತಾ ನಿಧನರಾಗುತ್ತಿದ್ದಂತೆ ಸಿಎಂ ಕುರ್ಚಿಗಾಗಿ ಕನಸು ಕಾಣುತ್ತಿದ್ದ ಶಶಿಕಲಾ ನಟರಾಜನ್ ಸುಪ್ರೀಂ ತೀರ್ಪಿನಡಿಯಲ್ಲಿ ಜೈಲು ಸೇರುವಂತಾಗಿದೆ. ಇತ್ತ ಅವರು ಜೈಲು ಸೇರುತ್ತಿದ್ದಂತೆ ಅತ್ತ ಚೆನ್ನೈನಲ್ಲಿ ಪನ್ನೀರ್ ಮತ್ತು ಪಳನಿ ಮುಖ್ಯಮಂತ್ರಿ ಪಟ್ಟಕ್ಕೇರಲು ಶತಾಯಗತಾಯ ಪ್ರಯತ್ನ ನಡೆಸುತ್ತಿದ್ದಾರೆ.

 
ನಿನ್ನೆ ಒಬ್ಬರ ಹಿಂದೊಬ್ಬರಂತೆ ಹಿಂದೊಬ್ಬರು ರಾಜಭವನಕ್ಕೆ ತೆರಳಿ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರನ್ನು ಭೇಟಿಯಾಗಿದ್ದು ಸರ್ಕಾರ ರಚನೆಗೆ ಹಕ್ಕು ಮಂಡನೆ ಅವಕಾಶ ಕೇಳಿದ್ದಾರೆ. 
 
ಶಶಿಕಲಾ ಆಪ್ತ ಪಳನಿ ಸ್ವಾಮಿ ತಮ್ಮ 10 ಜನ ಬೆಂಬಲಿಗರು ಮತ್ತು ಶಾಸಕರ ಬೆಂಬಲ ಪತ್ರದೊಂದಿಗೆ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅವಕಾಶ ಕೇಳಿದ್ದಾರೆ. ತಮಗೆ 124 ಶಾಸಕರ ಬೆಂಬಲವಿದೆ ಎಂದಿರುವ ಅವರು ಅದಕ್ಕೆ ಪೂರಕ ದಾಖಲೆಗಳನ್ನು ಸಹ ಒದಗಿಸಿದ್ದಾರೆ.
 
ಇನ್ನು ಪನ್ನೀರ್ ಸೆಲ್ವಂ ಸಹ ರಾಜ್ಯಪಾರನ್ನು ಭೇಟಿಯಾಗಿ ಗಹನವಾದ ಚರ್ಚೆ ನಡೆಸಿದ್ದಾರೆ. ಕೆಲ ಒತ್ತಡದಿಂದಾಗಿ ತಾವು ರಾಜೀನಾಮೆ ನೀಡಿದ್ದು, ತಮ್ಮ ರಾಜೀನಾಮೆಯನ್ನು ಹಿಂಪಡೆಯಬೇಕೆಂದವರು ಗೋಗರೆದಿದ್ದಾರೆ.
 
ಮತ್ತೀಗ ಚೆಂಡು ರಾಜ್ಯಪಾಲರ ಅಂಗಳದಲ್ಲಿದ್ದು, ಅವರು ಯಾವ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂಬ ಬಗ್ಗೆ ತಮಿಳುನಾಡಿಗೆ ತಮಿಳುನಾಡೇ ಕುತೂಹಲದಿಂದ ನೋಡುತ್ತಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments