Webdunia - Bharat's app for daily news and videos

Install App

ಪಂಚಾಯತ್ ಚುನಾವಣೆ: ಮತ ಹಾಕದಿದ್ದಕ್ಕೆ ನಾಲಿಗೆಯನ್ನೇ ಕತ್ತರಿಸಿದರು

Webdunia
ಶನಿವಾರ, 13 ಫೆಬ್ರವರಿ 2016 (15:26 IST)
ಉತ್ತರ ಪ್ರದೇಶದಲ್ಲಿ ಅಪರಾಧಗಳು ಹೆಚ್ಚುತ್ತಿರುವುದಕ್ಕೆ ದೃಷ್ಟಾಂತವೆಂಬಂತೆ ಪಂಚಾಯತ್ ಚುನಾವಣೆಯಲ್ಲಿ ಮತ ಹಾಕಲಿಲ್ಲವೆಂಬ ಕಾರಣಕ್ಕೆ ವ್ಯಕ್ತಿಯೊಬ್ಬನ ನಾಲಗೆಯನ್ನೇ ಕತ್ತರಿಸಿದ ಕ್ರೂರ ಘಟನೆ ಝಾನ್ಸಿ ಎಂಬ ಗ್ರಾಮದಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ಆತನಿಗೆ ಮನಬಂದಂತೆ ಥಳಿಸಿದ ಪರಿಣಾಮ ಕೈ ಮೂಳೆ ಸಹ ಮುರಿದಿದೆ

ರಾಷ್ಟ್ರೀಯ ಸುದ್ದಿಮಾಹಿನಿಯೊಂದರಲ್ಲಿ ಪ್ರಕಟವಾಗಿರುವ ವರದಿಯ ಪ್ರಕಾರ ಪೀಡಿತನನ್ನು ದಿನೇಶ್ ಅರಿಹರ್ ಎಂದು ಗುರುತಿಸಲಾಗಿದೆ. ಆತನ ಮನೆ ಮೇಲೆ ದಾಳಿ ನಡೆಸಿದ ಕೆಲ ಗೂಂಡಾಗಳು ಕುಟುಂಬದ ಸದಸ್ಯರನ್ನು ಹಿಗ್ಗಾಮುಗ್ಗಾ ಥಳಿಸಿದ್ದಲ್ಲದೆ ದಿನೇಶ್ ನಾಲಿಗೆಯನ್ನು ಕತ್ತರಿಸಿದ್ದಾರೆ. ಆತನನ್ನು ಆಸ್ಪತ್ರೆಗೆ ದಾಖಲಿಸಿ ನಾಲಿಗೆಯನ್ನು ಹೊಲೆಯಲಾಗಿದೆ. 
 
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
ಪ್ರಕಾಶ್ ಕರ್ನಭಾಯಿ ಎಂಬಾತ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದ. ತನ್ನ ಕುಟುಂಬದವರು ಮತ ಹಾಕಲು ಹೋಗಿರಲಿಲ್ಲವೆಂದು ಆತ ಕಡೆಯ ಗೂಂಡಾಗಳು ತಮ್ಮ ಮೇಲೆ ದಾಳಿ ನಡೆಸಿದ್ದಾರೆ. ಈ ಕುರಿತು ಪ್ರಕರಣವನ್ನು ದಾಖಲಿಸಿದರೂ ತನಿಖೆಗೆಗೆ ಇನ್ನು ಕೂಡ ಆದೇಶಿಸಿಲ್ಲ ಎಂದು ಆತ ಆರೋಪಿಸಿದ್ದಾನೆ. 
 
ಜಿಲ್ಲಾ ಮಾಜಿಸ್ಟ್ರೇಟ್ ಅನುರಾದ್ ಯಾದವ್ ಬಳಿ ದಿನೇಶ್ ನ್ಯಾಯಕ್ಕಾಗಿ ಮೊರೆ ಹೋಗಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments