Webdunia - Bharat's app for daily news and videos

Install App

ಅತ್ಯಾಚಾರದ ವೀಡಿಯೋದಿಂದ ಹಣ ಗಳಿಸುತ್ತೇನೆ ಎಂದ ಪಾಪಿ!

Webdunia
ಸೋಮವಾರ, 2 ಮೇ 2022 (10:35 IST)
ಜೈಪುರ : ಒಂದೂವರೆ ಲಕ್ಷ ರೂಪಾಯಿ ವರದಕ್ಷಿಣೆ ನೀಡಲಿಲ್ಲ ಎಂಬ ಕಾರಣಕ್ಕೆ ಪತ್ನಿ ಮೇಲೆ ಸಂಬಂಧಿಕರಿಂದಲೇ ಪತಿಯೊಬ್ಬ ಸಾಮೂಹಿಕ ಅತ್ಯಾಚಾರ ಎಸಗಿಸಿರುವ ಘಟನೆ ರಾಜಸ್ಥಾನದ ಭರತ್ಪುರದಲ್ಲಿ ನಡೆದಿದೆ.

ಅಲ್ಲದೇ ಗ್ಯಾಂಗ್ ರೇಪ್ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ. ಯೂಟ್ಯೂಬ್ನಲ್ಲಿ ಲೈಂಗಿಕ ದೌರ್ಜನ್ಯದ ವೀಡಿಯೋವನ್ನು ಅಪ್ಲೋಡ್ ಮಾಡುವ ಮೂಲಕ ಬರಬೇಕಾಗಿರುವ ವರದಕ್ಷಿಣೆ ಹಣವನ್ನು ಪಡೆಯುತ್ತೇನೆ ಎಂದು ಪತಿ ತನ್ನ ಹೆಂಡತಿಗೆ ಹೇಳಿದ್ದಾನೆ.

ಇದೀಗ ಸಂತ್ರಸ್ತೆ ಪತಿ ಮತ್ತು ಆತನ ಸಂಬಂಧಿಕರಿಬ್ಬರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾಳೆ.   ಭರತ್ಪುರದ ಕಮಾನ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ದೌಲತ್ ಸಾಹು ಅವರು, ಮಹಿಳೆಯೊಬ್ಬಳು ತನ್ನ ಪತಿ ಮತ್ತು ಇಬ್ಬರು ಸಂಬಂಧಿಕರು ಅತ್ಯಾಚಾರ ಎಸಗಿರುವುದಾಗಿ ದೂರು ದಾಖಲಿಸಿದ್ದಾಳೆ.

ಅಲ್ಲದೇ ಯೂಟ್ಯೂಬ್ಗೆ ಅಶ್ಲೀಲ ವೀಡಿಯೋ ಅಪ್ಲೋಡ್ ಮಾಡಲಾಗಿದೆ ಎಂಬ ಮಾತು ಕೇಳಿ ಬರುತ್ತಿದೆ. ಆದರೆ ಈ ಬಗ್ಗೆ ಖಚಿತ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

2019ರಲ್ಲಿ ದಂಪತಿ ಹರಿಯಾಣದಲ್ಲಿ ಮದುವೆಯಾಗಿದ್ದು, ಅಂದಿನಿಂದ ಮಹಿಳೆಗೆ ಅತ್ತೆ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ಈ ಕಾರಣದಿಂದ ಆಕೆ ತನ್ನ ಪೋಷಕರ ಮನೆಗೆ ಮರಳಿದ್ದಳು. ಆದರೆ ಪತಿ ಮತ್ತೆ ಆಕೆಯನ್ನು ಮನೆಗೆ ಕರೆದುಕೊಂಡು ಬಂದಿದ್ದನು.

ನಂತರ ಪತಿ ತನ್ನ ಇಬ್ಬರು ಸಂಬಂಧಿಕರನ್ನು ಮನೆಗೆ ಕರೆದುಕೊಂಡು ಬಂದು ಸಂತ್ರಸ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸುವಂತೆ ಸಂಬಂಧಿಕರಿಗೆ ಹೇಳಿ, ಘಟನೆಯನ್ನು ತನ್ನ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ ಮತ್ತು ನಿಮ್ಮ ಕುಟುಂಬಸ್ಥರು ನನಗೆ ವರದಕ್ಷಿಣೆ ನೀಡಲು ಸಾಧ್ಯವಾಗಲಿಲ್ಲ.

ಹಾಗಾಗಿ ನಾನು ಈ ವೀಡಿಯೋವನ್ನು ಯೂಟ್ಯೂಬ್ನಲ್ಲಿ ಹಾಕುವ ಮೂಲಕ ಅದೇ ಮೊತ್ತವನ್ನು ಗಳಿಸುತ್ತೇನೆ ಎಂದು ಹೇಳಿ ಅಶ್ಲೀಲ ವೀಡಿಯೋವನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ