Webdunia - Bharat's app for daily news and videos

Install App

ತಿಂಗಳಿಗೊಮ್ಮೆ 100 ಕೋಟಿ ಕಪ್ಪ ಕೊಡಲು ಸಚಿನ್ ವಾಝೆಗೆ ತಾಕೀತು ಮಾಡಿದ್ದ ಮಹಾ ಗೃಹಸಚಿವ!

Webdunia
ಭಾನುವಾರ, 21 ಮಾರ್ಚ್ 2021 (09:56 IST)
ಮುಂಬೈ: ಅನಿಲ್ ಅಂಬಾನಿ ಮನೆಯಲ್ಲಿ ಭದ್ರತಾ ವೈಫಲ್ಯದ ಕಾರಣದಿಂದಾಗಿ ಏಕಾಏಕಿ ವರ್ಗಾವಣೆಯಾಗಿರುವ ಮುಂಬೈ ಮಾಜಿ ಪೊಲೀಸ್ ಕಮಿಷನರ್ ಪರಂಬೀರ್ ಸಿಂಗ್ ಮಹಾರಾಷ್ಟ್ರ ಗೃಹಸಚಿವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ.


ಅನಿಲ್ ಅಂಬಾನಿ ಭದ್ರತಾ ವೈಫಲ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಎನ್ ಐಎ ಬಂಧಿಸಿರುವ ಎನ್ ಕೌಂಟರ್ ಸಚಿನ್ ವಾಝೆ ಅವರಿಗೆ ಗೃಹ ಸಚಿವ ಅನಿಲ್ ದೇಶ್ ಮುಖ್ ಪ್ರತೀ ತಿಂಗಳು ಬಾರ್, ರೆಸ್ಟಾರೆಂಟ್ ಇತ್ಯಾದಿ ಸಂಸ್ಥೆಗಳಿಂದ 100 ಕೋಟಿ ರೂ. ಸಂಗ್ರಹಿಸಿಕೊಡಲು ತಾಕೀತು ಮಾಡಿದ್ದರು ಎಂದು ಆರೋಪಿಸಿದ್ದಾರೆ.

ನಿರ್ಗಮಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದಿರುವ ಪರಂಬೀರ್ ಸಿಂಗ್ ಗೃಹಸಚಿವರು ಪೊಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದರು, ಹಣ ಸಂಗ್ರಹಿಸುವಂತೆ ಬೇಡಿಕೆಯಿಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಇದು ಭಾರೀ ಸಂಚಲನ ಮೂಡಿಸಿದೆ. ಇನ್ನೊಂದೆಡೆ ಈ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಅನಿಲ್ ದೇಶ್ ಮುಖ್ ಅಧಿಕಾರ ಕಳೆದುಕೊಂಡ ಹತಾಶೆಯಲ್ಲಿ ಪರಂಬೀರ್ ಸಿಂಗ್ ಇಂತಹ ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments