Webdunia - Bharat's app for daily news and videos

Install App

ಸಂತಾಪ ಸೂಚನೆ ಬಳಿಕ ಸಂಸತ್ ಕಲಾಪ ನಾಳೆಗೆ ಮುಂದೂಡಿಕೆ

16 ಮಸೂದೆಗಳ ಅನುಮೋದನೆಗೆ ಕೇಂದ್ರ ಸಿದ್ಧತೆ

Webdunia
ಸೋಮವಾರ, 17 ಜುಲೈ 2017 (13:31 IST)
ನವದೆಹಲಿ:ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿದ್ದು, ಬೆಳಗ್ಗೆ 11 ಗಂಟೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಮೊದಲ ದಿನದ  ಕಲಾಪ ಆರಂಭವಾಯಿತು. ಕಲಾಪ ಆರಂಭವಾಗುತ್ತಿದ್ದಂತೆ ಉಭಯ ಸದನಗಳಲ್ಲಿ ಮೃತ ಗಣ್ಯರು ಹಾಗೂ ಇತ್ತೀಚೆಗೆ  ಉಗ್ರರ ದಾಳಿ ಮೃತಪಟ್ಟ ಅಮರ್‌ನಾಥ್‌ ಯಾತ್ರಿಗಳಿಗೆ ಸಂತಾಪ ಸೂಚಿಸಲಾಯಿತು.
 
ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಅಮರನಾಥ್ ಯಾತ್ರೆ ಮೇಲಿನ ದಾಳಿಯನ್ನು ಒಕ್ಕೋರಲಿನಿಂದ ಖಂಡಿಸಲಾಗಿದ್ದು, ಅಂತೆಯೇ ದಾಳಿ ವೇಳೆ ಮೃತಪಟ್ಟ ಯಾತ್ರಾರ್ಥಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.  ಅಂತೆಯೇ ಇತ್ತೀಚೆಗೆ ಅಗಲಿದ ಸಂಸತ್ ನ ಮಾಜಿ ಸದಸ್ಯರಿಗೂ ಗೌರವ ಸಲ್ಲಿಕೆ ಮಾಡಿ ಸ್ಪೀಕರ್ ಕಲಾಪವನ್ನು ನಾಳೆಗೆ ಮುಂದೂಡಿದರು.
 
ಆಗಸ್ಟ್ 11ರವರೆಗೂ ಸಂಸತ್ ನ ಉಭಯ ಕಲಾಪಗಳು ನಡೆಯಲಿದ್ದು, ಕಾಶ್ಮೀರ ಹಿಂಸಾಚಾರ, ಡೊಕ್ಲಾಮ್ ವಿವಾದ, ಅಮರನಾಥ್ ಯಾತ್ರೆ ಮೇಲಿನ ದಾಳಿ, ಜಿಎಸ್ ಟಿ ಗೊಂದಲ, ಡಾರ್ಜಲಿಂಗ್ ಹಿಂಸಾಚಾರ ಸೇರಿದಂತೆ ವಿವಿಧ  ವಿಷಯಗಳನ್ನು ಮುಂದಿಟ್ಟುಕೊಂಡು ವಿಪಕ್ಷಗಳು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಿದ್ಧವಾಗಿವೆ. ಇನ್ನು ಕೇಂದ್ರ ಸರ್ಕಾರ ಗ್ರಾಹಕ ರಕ್ಷಣಾ ಮಸೂದೆ, ಜಮ್ಮುಮತ್ತು ಕಾಶ್ಮೀರದಲ್ಲಿ ಜಿಎಸ್ ಟಿ ಜಾರಿ ಕುರಿತ ಮಸೂದೆ  ಸೇರಿದಂತೆ ಒಟ್ಟು 16 ಹೊಸ ಮಸೂದೆಗಳಿಗೆ ಅನುಮೋದನೆ ಪಡೆಯಲು ಕಾರ್ಯತಂತ್ರ ರೂಪಿಸಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments